Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...