Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...