Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...