Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...