Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...