Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....