Homeಕರ್ನಾಟಕ‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ ಸತತ ಎರಡನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿದ್ದು, ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ವು ಪಾಲಿಕೆಯ ಕ್ರಮವನ್ನು ಶುಕ್ರವಾರ ತೀವ್ರವಾಗಿ ಖಂಡಿಸಿದೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ಪುಡಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಕಂದಾಯ ಗ್ರಾಮಗಳಾಗಿ ಲಂಬಾಣಿ ತಾಂಡಗಳ ಪರಿವರ್ತನೆಗೆ ಸರ್ವೇ: ಸಿಎಂ

ಈ ಬಗ್ಗೆ ಆಕ್ರೊಶ ವ್ಯಕ್ತಪಡಿಸಿರುವ ಬೀದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, “ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ಇದ್ದವರಿಗೆ ತೊಂದರೆ ಕೊಟ್ಟಿದ್ದಾರೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ರೀತಿಯಾಗಿ ಏಕಾಏಕಿ ತೆರವು ಮಾಡಿದ್ದು ಎಷ್ಟು ಸರಿ? ಬೀದಿ ಬದಿಯ ನಿಯಮಾನುಸಾರ ಪಟ್ಟಣ ವ್ಯಾಪಾರ ಸಮಿತಿ ಸಭೆಯಲ್ಲಿ ಚರ್ಚಿಸದೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮಾಡಿಸುವುದಕ್ಕಾಗಿ ಮಹಾನಗರ ಪಾಲಿಕೆಯು ಇತ್ತೀಚೆಗೆ ಸರ್ವೆ ನಡೆಸಿತ್ತು. ಆದರೆ ಇಂದು ಸರ್ವೆ ನಡೆಸಿರುವ ಹಲವು ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದೆ ಎಂದು ಮುಸ್ತಫಾ ದೂರಿದ್ದಾರೆ.

“ಅಂಗಡಿಗಳ ತೆರವುಗೊಳಿಸಬೇಕಾದರೆ ‘ಪಟ್ಟಣ ವ್ಯಾಪಾರ ಸಮಿತಿ’ಯ ಸಭೆ ನಡೆಸಿ ಅಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಪಾಲಿಕೆಯು ಈ ರೀತಿಯ ಯಾವುದೆ ಸಭೆಯನ್ನು ನಡೆಸಿಲ್ಲ. ಅವವೇ ತೀರ್ಮಾನ ತೆಗೆದುಕೊಳ್ಳುವುದಾದರೆ ಪಟ್ಟಣ ವ್ಯಾಪಾರ ಸಮಿತಿ ಯಾಕೆ? ಅದೊಂದು ಚುನಾಯಿತ ಸಮಿತಿಯಾಗಿದ್ದು, ಅದರ ಸಭೆಯಲ್ಲಿ ಪಾಲಿಕೆಯು ತೆರವುಗೊಳಿಸುವ ವಿಚಾರವನ್ನು ಇಡಬೇಕಾಗಿತ್ತು” ಎಂದು ಮುಸ್ತಫಾ ಹೇಳಿದ್ದಾರೆ.

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು. ಆದರೆ ಶುಕ್ರವಾರದಂದು ಎರಡು ಜೆಸಿಬಿ, ಎರಡು ಲಾರಿ ಮುಖಾಂತರ ಬಂದಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜೆಸಿಬಿಯಲ್ಲಿ ಜಜ್ಜಿ ಪುಡಿಪುಡಿ ಮಾಡಿ ಲಾರಿಗೆ ತುಂಬಿಸಿದ್ದಾರೆ ಎಂದು ಮುಸ್ತಫಾ ಆರೋಪಿಸಿದ್ದಾರೆ.

ಇದನ್ನೂ ಓದಿ:ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

ಸರ್ಕಾರ ಬೀದಿಬದಿ ವ್ಯಾಪಾರಿ ಎಂದು ಗುರುತಿಸಿ ಚೀಟಿ ಕೊಟ್ಟವರ ಮೇಲೆ ಕೂಡಾ ಪೊಲೀಸ್‌ ರಕ್ಷಣೆಯಲ್ಲಿ ದಬ್ಬಾಳಿಕೆ ಮಾಡಲಾಗಿದೆ. ಅಧಿಕಾರಿಗಳು ಬಡ ವ್ಯಾಪಾರಿಗಳೊಂದಿಗೆ ಮಾತನಾಡುವಷ್ಟು ವ್ಯಯಧಾನ ಇಟ್ಟುಕೊಂಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆರವು ಕಾರ್ಯಾಚರಣೆ ವಿರುದ್ದ ಸೋಮವಾರದಂದು ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಮಹಾನಗರ ಪಾಲಿಕೆಯ ಆಯುಕ್ತರನ್ನು ಚೀಟಿಯಾಗಿ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಇಲ್ಲದವರು ಮತ್ತು ಸರ್ವೆ ಆಗಿರುವ ಬಡ ಬೀದಿ ಬದಿ ವ್ಯಾಪಾರಸ್ಥರ ಪರವಾಗಿ ಚರ್ಚಿಸಲಿದ್ದೇವೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಹೇಳಿದ್ದಾರೆ.

ಈ ಬಗ್ಗೆ ಮಹಾನಗರ ಪಾಲಿಕೆಯ ಕಮಿಷನರ್ ಅಕ್ಷಯ್‌ ಶ್ರೀಧರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು, ಆದರೆ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಿದ ನಂತರ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ:ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...