Homeಕರ್ನಾಟಕ‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ ಸತತ ಎರಡನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿದ್ದು, ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ವು ಪಾಲಿಕೆಯ ಕ್ರಮವನ್ನು ಶುಕ್ರವಾರ ತೀವ್ರವಾಗಿ ಖಂಡಿಸಿದೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ಪುಡಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಕಂದಾಯ ಗ್ರಾಮಗಳಾಗಿ ಲಂಬಾಣಿ ತಾಂಡಗಳ ಪರಿವರ್ತನೆಗೆ ಸರ್ವೇ: ಸಿಎಂ

ಈ ಬಗ್ಗೆ ಆಕ್ರೊಶ ವ್ಯಕ್ತಪಡಿಸಿರುವ ಬೀದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, “ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ಇದ್ದವರಿಗೆ ತೊಂದರೆ ಕೊಟ್ಟಿದ್ದಾರೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ರೀತಿಯಾಗಿ ಏಕಾಏಕಿ ತೆರವು ಮಾಡಿದ್ದು ಎಷ್ಟು ಸರಿ? ಬೀದಿ ಬದಿಯ ನಿಯಮಾನುಸಾರ ಪಟ್ಟಣ ವ್ಯಾಪಾರ ಸಮಿತಿ ಸಭೆಯಲ್ಲಿ ಚರ್ಚಿಸದೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮಾಡಿಸುವುದಕ್ಕಾಗಿ ಮಹಾನಗರ ಪಾಲಿಕೆಯು ಇತ್ತೀಚೆಗೆ ಸರ್ವೆ ನಡೆಸಿತ್ತು. ಆದರೆ ಇಂದು ಸರ್ವೆ ನಡೆಸಿರುವ ಹಲವು ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದೆ ಎಂದು ಮುಸ್ತಫಾ ದೂರಿದ್ದಾರೆ.

“ಅಂಗಡಿಗಳ ತೆರವುಗೊಳಿಸಬೇಕಾದರೆ ‘ಪಟ್ಟಣ ವ್ಯಾಪಾರ ಸಮಿತಿ’ಯ ಸಭೆ ನಡೆಸಿ ಅಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಪಾಲಿಕೆಯು ಈ ರೀತಿಯ ಯಾವುದೆ ಸಭೆಯನ್ನು ನಡೆಸಿಲ್ಲ. ಅವವೇ ತೀರ್ಮಾನ ತೆಗೆದುಕೊಳ್ಳುವುದಾದರೆ ಪಟ್ಟಣ ವ್ಯಾಪಾರ ಸಮಿತಿ ಯಾಕೆ? ಅದೊಂದು ಚುನಾಯಿತ ಸಮಿತಿಯಾಗಿದ್ದು, ಅದರ ಸಭೆಯಲ್ಲಿ ಪಾಲಿಕೆಯು ತೆರವುಗೊಳಿಸುವ ವಿಚಾರವನ್ನು ಇಡಬೇಕಾಗಿತ್ತು” ಎಂದು ಮುಸ್ತಫಾ ಹೇಳಿದ್ದಾರೆ.

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು. ಆದರೆ ಶುಕ್ರವಾರದಂದು ಎರಡು ಜೆಸಿಬಿ, ಎರಡು ಲಾರಿ ಮುಖಾಂತರ ಬಂದಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜೆಸಿಬಿಯಲ್ಲಿ ಜಜ್ಜಿ ಪುಡಿಪುಡಿ ಮಾಡಿ ಲಾರಿಗೆ ತುಂಬಿಸಿದ್ದಾರೆ ಎಂದು ಮುಸ್ತಫಾ ಆರೋಪಿಸಿದ್ದಾರೆ.

ಇದನ್ನೂ ಓದಿ:ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

ಸರ್ಕಾರ ಬೀದಿಬದಿ ವ್ಯಾಪಾರಿ ಎಂದು ಗುರುತಿಸಿ ಚೀಟಿ ಕೊಟ್ಟವರ ಮೇಲೆ ಕೂಡಾ ಪೊಲೀಸ್‌ ರಕ್ಷಣೆಯಲ್ಲಿ ದಬ್ಬಾಳಿಕೆ ಮಾಡಲಾಗಿದೆ. ಅಧಿಕಾರಿಗಳು ಬಡ ವ್ಯಾಪಾರಿಗಳೊಂದಿಗೆ ಮಾತನಾಡುವಷ್ಟು ವ್ಯಯಧಾನ ಇಟ್ಟುಕೊಂಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆರವು ಕಾರ್ಯಾಚರಣೆ ವಿರುದ್ದ ಸೋಮವಾರದಂದು ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಮಹಾನಗರ ಪಾಲಿಕೆಯ ಆಯುಕ್ತರನ್ನು ಚೀಟಿಯಾಗಿ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಇಲ್ಲದವರು ಮತ್ತು ಸರ್ವೆ ಆಗಿರುವ ಬಡ ಬೀದಿ ಬದಿ ವ್ಯಾಪಾರಸ್ಥರ ಪರವಾಗಿ ಚರ್ಚಿಸಲಿದ್ದೇವೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಹೇಳಿದ್ದಾರೆ.

ಈ ಬಗ್ಗೆ ಮಹಾನಗರ ಪಾಲಿಕೆಯ ಕಮಿಷನರ್ ಅಕ್ಷಯ್‌ ಶ್ರೀಧರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು, ಆದರೆ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಿದ ನಂತರ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ:ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...