Homeಕರ್ನಾಟಕಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಭಾನುವಾರ ಮಧ್ಯರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಶನಿವಾರವೇ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿತ್ತು. ರಾಜ್ಯಪಾಲರ ಅನುಮೋದನೆಗೆ ಕಳುಹಿಸಲು ತಯಾರಿಯೂ ನಡೆದಿತ್ತು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ ತಕ್ಷಣವೇ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ.

ಬೆಂಗಳೂರು ನಗರ ಅಭಿವೃದ್ಧಿ ಅಥವಾ ಬೇರೆ ಯಾವುದಾದರೂ ಪ್ರಮುಖ ಖಾತೆ ನೀಡುವಂತೆ ರಾಮಲಿಂಗಾರೆಡ್ಡಿ ಅವರು ಬೇಡಿಕೆ ಇಟ್ಟಿದ್ದರು. ತಮಗಿಂತ ಕಿರಿಯರಿಗೆ ಪ್ರಮುಖ ಖಾತೆ ಹಂಚಿಕೆ ಮಾಡಿರುವುದರಿಂದ ಮುನಿಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಭಾನುವಾರ ಮನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಭಾನುವಾರ ತೆರಳಿ ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹೊಸ ಸಚಿವರಿಗೆ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ದೊಡ್ಡತಲೆನೋವಾಗಿ ಪರಿಣಮಿಸಿತ್ತು. ಭಾನುವಾರ ಮಧ್ಯರಾತ್ರಿವರೆಗೂ ಕೈ ನಾಯಕರು ಖಾತೆ ಹಂಚಿಕೆ ಪಟ್ಟಿ ಅಂತಿಮಗೊಳಿಸುವಲ್ಲಿ ಹೈರಾಣಾದರು.

ಶನಿವಾರವೇ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಪಟ್ಟಿಯನ್ನು ಅಂತಿಮಗೊಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮಹತ್ವದ ಖಾತೆಗಳಿಗೆ ಪಟ್ಟುಹಿಡಿದಿದ್ದ ಕಾರಣದಿಂದ ಅದನ್ನು ತಡೆಹಿಡಿದಿದ್ದರು. ಹಂಚಿಕೆ ಮಾಡಲಾಗಿದ್ದ ಖಾತೆಗೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಕಾರಣ, ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದರು.

ಇದನ್ನೂ ಓದಿ: 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

ಶನಿವಾರ ರಾತ್ರಿ 10 ಗಂಟೆಗೆ ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಆ ಪಟ್ಟಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿತು ಹಾಗಾಗಿ ಪಟ್ಟಿ ಬಿಡುಗಡೆ ವಿಳಂಭವಾಯಿತು ಎಂದು ಮೂಲಗಳು ತಿಳಿಸಿವೆ.

ಡಿಸಿಎಂ ಆಕಾಂಕ್ಷಿಯಾಗಿದ್ದ ಡಾ. ಜಿ ಪರಮೇಶ್ವರ ಅವರಿಗೆ ಗೃಹ ಖಾತೆ ನೀಡಿದ್ದರು. ಡಿಸಿಎಂ ಸಿಗದಿದ್ದರೂ ಪ್ರಮುಖ ಖಾತೆಯಾದ ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದರು. ಹಾಗಾಗಿ ಸ್ವಲ್ಪ ಅಸಮಧಾನಗೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಗೃಹ ಖಾತೆಯನ್ನೇ ನೀಡಲಾಗಿದೆ.

ಇನ್ನೂ ಕೆ.ಎಚ್‌.ಮುನಿಯಪ್ಪ ಅವರು ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಮೇಲೆ ಒಲವು ಹೊಂದಿದ್ದರು. ಆದರೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

  1. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    ಕೃಷ್ಣ ಬೈರೇಗೌಡ- ಕಂದಾಯ
  12. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  13. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  14. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  15. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  16. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  17. ಚಲುವರಾಯಸ್ವಾಮಿ- ಕೃಷಿ
  18. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  19. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  20. ಸಂತೋಷ ಲಾಡ್- ಕಾರ್ಮಿಕ
  21. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  22. ಆರ್.ಬಿ.ತಿಮ್ಮಾಪುರ- ಅಬಕಾರಿ
  23. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  24. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  25. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  26. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  27. ಕೆ.ಎನ್.ರಾಜಣ್ಣ: ಸಹಕಾರ
  28. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  29. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  30. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  31. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  32. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  33. ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...