Homeಕರ್ನಾಟಕಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಭಾನುವಾರ ಮಧ್ಯರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಶನಿವಾರವೇ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿತ್ತು. ರಾಜ್ಯಪಾಲರ ಅನುಮೋದನೆಗೆ ಕಳುಹಿಸಲು ತಯಾರಿಯೂ ನಡೆದಿತ್ತು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ ತಕ್ಷಣವೇ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ.

ಬೆಂಗಳೂರು ನಗರ ಅಭಿವೃದ್ಧಿ ಅಥವಾ ಬೇರೆ ಯಾವುದಾದರೂ ಪ್ರಮುಖ ಖಾತೆ ನೀಡುವಂತೆ ರಾಮಲಿಂಗಾರೆಡ್ಡಿ ಅವರು ಬೇಡಿಕೆ ಇಟ್ಟಿದ್ದರು. ತಮಗಿಂತ ಕಿರಿಯರಿಗೆ ಪ್ರಮುಖ ಖಾತೆ ಹಂಚಿಕೆ ಮಾಡಿರುವುದರಿಂದ ಮುನಿಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಭಾನುವಾರ ಮನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಭಾನುವಾರ ತೆರಳಿ ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹೊಸ ಸಚಿವರಿಗೆ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ದೊಡ್ಡತಲೆನೋವಾಗಿ ಪರಿಣಮಿಸಿತ್ತು. ಭಾನುವಾರ ಮಧ್ಯರಾತ್ರಿವರೆಗೂ ಕೈ ನಾಯಕರು ಖಾತೆ ಹಂಚಿಕೆ ಪಟ್ಟಿ ಅಂತಿಮಗೊಳಿಸುವಲ್ಲಿ ಹೈರಾಣಾದರು.

ಶನಿವಾರವೇ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಪಟ್ಟಿಯನ್ನು ಅಂತಿಮಗೊಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮಹತ್ವದ ಖಾತೆಗಳಿಗೆ ಪಟ್ಟುಹಿಡಿದಿದ್ದ ಕಾರಣದಿಂದ ಅದನ್ನು ತಡೆಹಿಡಿದಿದ್ದರು. ಹಂಚಿಕೆ ಮಾಡಲಾಗಿದ್ದ ಖಾತೆಗೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಕಾರಣ, ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದರು.

ಇದನ್ನೂ ಓದಿ: 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

ಶನಿವಾರ ರಾತ್ರಿ 10 ಗಂಟೆಗೆ ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಆ ಪಟ್ಟಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿತು ಹಾಗಾಗಿ ಪಟ್ಟಿ ಬಿಡುಗಡೆ ವಿಳಂಭವಾಯಿತು ಎಂದು ಮೂಲಗಳು ತಿಳಿಸಿವೆ.

ಡಿಸಿಎಂ ಆಕಾಂಕ್ಷಿಯಾಗಿದ್ದ ಡಾ. ಜಿ ಪರಮೇಶ್ವರ ಅವರಿಗೆ ಗೃಹ ಖಾತೆ ನೀಡಿದ್ದರು. ಡಿಸಿಎಂ ಸಿಗದಿದ್ದರೂ ಪ್ರಮುಖ ಖಾತೆಯಾದ ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದರು. ಹಾಗಾಗಿ ಸ್ವಲ್ಪ ಅಸಮಧಾನಗೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಗೃಹ ಖಾತೆಯನ್ನೇ ನೀಡಲಾಗಿದೆ.

ಇನ್ನೂ ಕೆ.ಎಚ್‌.ಮುನಿಯಪ್ಪ ಅವರು ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಮೇಲೆ ಒಲವು ಹೊಂದಿದ್ದರು. ಆದರೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

  1. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    ಕೃಷ್ಣ ಬೈರೇಗೌಡ- ಕಂದಾಯ
  12. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  13. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  14. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  15. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  16. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  17. ಚಲುವರಾಯಸ್ವಾಮಿ- ಕೃಷಿ
  18. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  19. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  20. ಸಂತೋಷ ಲಾಡ್- ಕಾರ್ಮಿಕ
  21. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  22. ಆರ್.ಬಿ.ತಿಮ್ಮಾಪುರ- ಅಬಕಾರಿ
  23. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  24. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  25. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  26. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  27. ಕೆ.ಎನ್.ರಾಜಣ್ಣ: ಸಹಕಾರ
  28. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  29. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  30. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  31. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  32. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  33. ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...