Homeಕರ್ನಾಟಕಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಭಾನುವಾರ ಮಧ್ಯರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಶನಿವಾರವೇ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿತ್ತು. ರಾಜ್ಯಪಾಲರ ಅನುಮೋದನೆಗೆ ಕಳುಹಿಸಲು ತಯಾರಿಯೂ ನಡೆದಿತ್ತು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ ತಕ್ಷಣವೇ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ.

ಬೆಂಗಳೂರು ನಗರ ಅಭಿವೃದ್ಧಿ ಅಥವಾ ಬೇರೆ ಯಾವುದಾದರೂ ಪ್ರಮುಖ ಖಾತೆ ನೀಡುವಂತೆ ರಾಮಲಿಂಗಾರೆಡ್ಡಿ ಅವರು ಬೇಡಿಕೆ ಇಟ್ಟಿದ್ದರು. ತಮಗಿಂತ ಕಿರಿಯರಿಗೆ ಪ್ರಮುಖ ಖಾತೆ ಹಂಚಿಕೆ ಮಾಡಿರುವುದರಿಂದ ಮುನಿಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಭಾನುವಾರ ಮನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಭಾನುವಾರ ತೆರಳಿ ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹೊಸ ಸಚಿವರಿಗೆ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ದೊಡ್ಡತಲೆನೋವಾಗಿ ಪರಿಣಮಿಸಿತ್ತು. ಭಾನುವಾರ ಮಧ್ಯರಾತ್ರಿವರೆಗೂ ಕೈ ನಾಯಕರು ಖಾತೆ ಹಂಚಿಕೆ ಪಟ್ಟಿ ಅಂತಿಮಗೊಳಿಸುವಲ್ಲಿ ಹೈರಾಣಾದರು.

ಶನಿವಾರವೇ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಪಟ್ಟಿಯನ್ನು ಅಂತಿಮಗೊಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮಹತ್ವದ ಖಾತೆಗಳಿಗೆ ಪಟ್ಟುಹಿಡಿದಿದ್ದ ಕಾರಣದಿಂದ ಅದನ್ನು ತಡೆಹಿಡಿದಿದ್ದರು. ಹಂಚಿಕೆ ಮಾಡಲಾಗಿದ್ದ ಖಾತೆಗೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಕಾರಣ, ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದರು.

ಇದನ್ನೂ ಓದಿ: 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

ಶನಿವಾರ ರಾತ್ರಿ 10 ಗಂಟೆಗೆ ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಆ ಪಟ್ಟಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿತು ಹಾಗಾಗಿ ಪಟ್ಟಿ ಬಿಡುಗಡೆ ವಿಳಂಭವಾಯಿತು ಎಂದು ಮೂಲಗಳು ತಿಳಿಸಿವೆ.

ಡಿಸಿಎಂ ಆಕಾಂಕ್ಷಿಯಾಗಿದ್ದ ಡಾ. ಜಿ ಪರಮೇಶ್ವರ ಅವರಿಗೆ ಗೃಹ ಖಾತೆ ನೀಡಿದ್ದರು. ಡಿಸಿಎಂ ಸಿಗದಿದ್ದರೂ ಪ್ರಮುಖ ಖಾತೆಯಾದ ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದರು. ಹಾಗಾಗಿ ಸ್ವಲ್ಪ ಅಸಮಧಾನಗೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಗೃಹ ಖಾತೆಯನ್ನೇ ನೀಡಲಾಗಿದೆ.

ಇನ್ನೂ ಕೆ.ಎಚ್‌.ಮುನಿಯಪ್ಪ ಅವರು ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಮೇಲೆ ಒಲವು ಹೊಂದಿದ್ದರು. ಆದರೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

  1. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    ಕೃಷ್ಣ ಬೈರೇಗೌಡ- ಕಂದಾಯ
  12. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  13. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  14. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  15. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  16. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  17. ಚಲುವರಾಯಸ್ವಾಮಿ- ಕೃಷಿ
  18. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  19. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  20. ಸಂತೋಷ ಲಾಡ್- ಕಾರ್ಮಿಕ
  21. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  22. ಆರ್.ಬಿ.ತಿಮ್ಮಾಪುರ- ಅಬಕಾರಿ
  23. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  24. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  25. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  26. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  27. ಕೆ.ಎನ್.ರಾಜಣ್ಣ: ಸಹಕಾರ
  28. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  29. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  30. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  31. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  32. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  33. ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...