Homeಕರ್ನಾಟಕನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

ನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

- Advertisement -
- Advertisement -

ಕರ್ನಾಟಕದ ನಾಡದೇವತೆಯ ಅಧಿಕೃತ ಚಿತ್ರವೊಂದನ್ನು ಸಲ್ಲಿಸುವಂತೆ ನೇಮಿಸಲಾಗಿದ್ದ ಚಿತ್ರಕಲಾವಿದರ ಸಮಿತಿಗೆ ನಿಯೋಜಿತ ಕಲಾವಿದರು ದೇವಿಯ ಚಿತ್ರವನ್ನು ಹಸ್ತಾಂತರಿಸಿದ್ದಾರೆ. ಸರ್ಕಾರದಿಂದ ನೇಮಿಸಲಾಗಿದ್ದ ಸಮಿತಿ ಈ ಚಿತ್ರವನ್ನು ಮೊದಲು ಅಂಗೀಕರಿಸುತ್ತದೆ. ನಂತರವಷ್ಟೇ ಸರ್ಕಾರದ ಒಪ್ಪಿಗೆಗೆ ಕಳುಹಿಸಲಾಗುತ್ತದೆ.

ನಾಡದೇವಿಯ ಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವರುಗಳ ಚಿತ್ರಗಳನ್ನು ಹಲವಾರು ಕಾರ್ಯಕ್ರಮಗಳಲ್ಲಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆಯನ್ನು ನೀಗಿಸಲು 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾದ ಡಿ.ಮಹೇಂದ್ರ ಅವರ ಅಧ್ಯಕ್ಷತೆಯ ಐದು ಜನರ ಈ ಸಮಿತಿಯು, ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಚಿತ್ರ ರಚಿಸುವಂತೆ ಕಲಾವಿದರಾದ ಸೋಮಶೇಖರ್.ಕೆ ಅವರಿಗೆ ಕೇಳಿತ್ತು. ಇದೀಗ ಅವರು ಸಮಿತಿ ಸೂಚನೆಯಂತೆ ಕಲಾವಿದರು ಚಿತ್ರವನ್ನು ರೂಪಿಸಿ ಸಮಿತಿಗೆ ಸಲ್ಲಿಸಿದ್ದಾರೆ.

ನಾಡದೇವತೆಯ ಚಿತ್ರದಲ್ಲಿ ಕರ್ನಾಟಕದ ನಕ್ಷೆ, ಮುಖದಲ್ಲಿ ಸ್ವಾಭಾವಿಕ ಸೌಂದರ್ಯ, ದೈವಿ ಭಾವ, ವಾಸ್ತವಿಕತೆಗೆ ಹತ್ತಿರವಾದ ಎರಡು ಕೈಗಳು, ಬಲಗೈಯಲ್ಲಿ ಅಭಯ ಮುದ್ರೆ, ಎಡಗೈಯಲ್ಲಿರುವ ತಾಳೆಗರಿ, ಕನ್ನಡ ಭಾಷಾ ಸಂಪತ್ತು ಇರುವುದನ್ನು ಕಾಣಬಹುದು.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಭವ್ಯವಾಗಿ ಕುಳಿತಿರುವ ನಾಡದೇವತೆ ಚಿತ್ರ, ಕನ್ನಡಾಭಿಮಾನದ ಸಂಕೇತವಾಗಿ ಕರ್ನಾಟಕದ ಧ್ವಜ, ಸಿರಿ ಸಂಪತ್ತಿನ ಸೂಚಕವಾಗಿ ಹಸಿರು ಸೀರೆ, ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು, ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಸಿಂಹ ಲಾಂಛನ, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ, ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ಹೊಯ್ಸಳ ಲಾಂಛನದ ಪದಕ, ಕಾಲಿನಲ್ಲಿ ಕಡಗ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು, ಪದತಲದಲ್ಲಿ ಕಮಲ ಇತ್ಯಾದಿ ಚಿತ್ರಣವನ್ನು ನಾಡದೇವತೆಯ ಚಿತ್ರದಲ್ಲಿ ಕಾಣಹುದು.

“ಹಿಂದೆ ರಚಿಸಿರುವ ಚಿತ್ರಗಳು ಸುಂದರವಾಗಿದ್ದರೂ, ಅಲ್ಲಿ ಕರ್ನಾಟಕದ ವೈಶಿಷ್ಟ್ಯತೆಯನ್ನು ಬಿಂಬಿಸುವಲ್ಲಿ ಕೊರತೆ ಎದ್ದು ಕಾಣುತ್ತಿತ್ತು. ಹೀಗಾಗಿ ಒಂದು ಅಧಿಕೃತ ಕರ್ನಾಟಕ ರಾಜ್ಯದ ನಾಡದೇವತೆಯ ಚಿತ್ರದ ಅವಶ್ಯಕತೆ ಹಿನ್ನೆಲೆಯಲ್ಲಿ ಸದರಿ ಚಿತ್ರವನ್ನು ರಚಿಸಲಾಗಿರುತ್ತದೆ” ಎಂದು ಸಮಿತಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...