Homeಕರ್ನಾಟಕನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

ನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

- Advertisement -
- Advertisement -

ಕರ್ನಾಟಕದ ನಾಡದೇವತೆಯ ಅಧಿಕೃತ ಚಿತ್ರವೊಂದನ್ನು ಸಲ್ಲಿಸುವಂತೆ ನೇಮಿಸಲಾಗಿದ್ದ ಚಿತ್ರಕಲಾವಿದರ ಸಮಿತಿಗೆ ನಿಯೋಜಿತ ಕಲಾವಿದರು ದೇವಿಯ ಚಿತ್ರವನ್ನು ಹಸ್ತಾಂತರಿಸಿದ್ದಾರೆ. ಸರ್ಕಾರದಿಂದ ನೇಮಿಸಲಾಗಿದ್ದ ಸಮಿತಿ ಈ ಚಿತ್ರವನ್ನು ಮೊದಲು ಅಂಗೀಕರಿಸುತ್ತದೆ. ನಂತರವಷ್ಟೇ ಸರ್ಕಾರದ ಒಪ್ಪಿಗೆಗೆ ಕಳುಹಿಸಲಾಗುತ್ತದೆ.

ನಾಡದೇವಿಯ ಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವರುಗಳ ಚಿತ್ರಗಳನ್ನು ಹಲವಾರು ಕಾರ್ಯಕ್ರಮಗಳಲ್ಲಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆಯನ್ನು ನೀಗಿಸಲು 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾದ ಡಿ.ಮಹೇಂದ್ರ ಅವರ ಅಧ್ಯಕ್ಷತೆಯ ಐದು ಜನರ ಈ ಸಮಿತಿಯು, ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಚಿತ್ರ ರಚಿಸುವಂತೆ ಕಲಾವಿದರಾದ ಸೋಮಶೇಖರ್.ಕೆ ಅವರಿಗೆ ಕೇಳಿತ್ತು. ಇದೀಗ ಅವರು ಸಮಿತಿ ಸೂಚನೆಯಂತೆ ಕಲಾವಿದರು ಚಿತ್ರವನ್ನು ರೂಪಿಸಿ ಸಮಿತಿಗೆ ಸಲ್ಲಿಸಿದ್ದಾರೆ.

ನಾಡದೇವತೆಯ ಚಿತ್ರದಲ್ಲಿ ಕರ್ನಾಟಕದ ನಕ್ಷೆ, ಮುಖದಲ್ಲಿ ಸ್ವಾಭಾವಿಕ ಸೌಂದರ್ಯ, ದೈವಿ ಭಾವ, ವಾಸ್ತವಿಕತೆಗೆ ಹತ್ತಿರವಾದ ಎರಡು ಕೈಗಳು, ಬಲಗೈಯಲ್ಲಿ ಅಭಯ ಮುದ್ರೆ, ಎಡಗೈಯಲ್ಲಿರುವ ತಾಳೆಗರಿ, ಕನ್ನಡ ಭಾಷಾ ಸಂಪತ್ತು ಇರುವುದನ್ನು ಕಾಣಬಹುದು.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಭವ್ಯವಾಗಿ ಕುಳಿತಿರುವ ನಾಡದೇವತೆ ಚಿತ್ರ, ಕನ್ನಡಾಭಿಮಾನದ ಸಂಕೇತವಾಗಿ ಕರ್ನಾಟಕದ ಧ್ವಜ, ಸಿರಿ ಸಂಪತ್ತಿನ ಸೂಚಕವಾಗಿ ಹಸಿರು ಸೀರೆ, ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು, ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಸಿಂಹ ಲಾಂಛನ, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ, ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ಹೊಯ್ಸಳ ಲಾಂಛನದ ಪದಕ, ಕಾಲಿನಲ್ಲಿ ಕಡಗ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು, ಪದತಲದಲ್ಲಿ ಕಮಲ ಇತ್ಯಾದಿ ಚಿತ್ರಣವನ್ನು ನಾಡದೇವತೆಯ ಚಿತ್ರದಲ್ಲಿ ಕಾಣಹುದು.

“ಹಿಂದೆ ರಚಿಸಿರುವ ಚಿತ್ರಗಳು ಸುಂದರವಾಗಿದ್ದರೂ, ಅಲ್ಲಿ ಕರ್ನಾಟಕದ ವೈಶಿಷ್ಟ್ಯತೆಯನ್ನು ಬಿಂಬಿಸುವಲ್ಲಿ ಕೊರತೆ ಎದ್ದು ಕಾಣುತ್ತಿತ್ತು. ಹೀಗಾಗಿ ಒಂದು ಅಧಿಕೃತ ಕರ್ನಾಟಕ ರಾಜ್ಯದ ನಾಡದೇವತೆಯ ಚಿತ್ರದ ಅವಶ್ಯಕತೆ ಹಿನ್ನೆಲೆಯಲ್ಲಿ ಸದರಿ ಚಿತ್ರವನ್ನು ರಚಿಸಲಾಗಿರುತ್ತದೆ” ಎಂದು ಸಮಿತಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...