Homeಕರ್ನಾಟಕನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

ನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

- Advertisement -
- Advertisement -

ಕರ್ನಾಟಕದ ನಾಡದೇವತೆಯ ಅಧಿಕೃತ ಚಿತ್ರವೊಂದನ್ನು ಸಲ್ಲಿಸುವಂತೆ ನೇಮಿಸಲಾಗಿದ್ದ ಚಿತ್ರಕಲಾವಿದರ ಸಮಿತಿಗೆ ನಿಯೋಜಿತ ಕಲಾವಿದರು ದೇವಿಯ ಚಿತ್ರವನ್ನು ಹಸ್ತಾಂತರಿಸಿದ್ದಾರೆ. ಸರ್ಕಾರದಿಂದ ನೇಮಿಸಲಾಗಿದ್ದ ಸಮಿತಿ ಈ ಚಿತ್ರವನ್ನು ಮೊದಲು ಅಂಗೀಕರಿಸುತ್ತದೆ. ನಂತರವಷ್ಟೇ ಸರ್ಕಾರದ ಒಪ್ಪಿಗೆಗೆ ಕಳುಹಿಸಲಾಗುತ್ತದೆ.

ನಾಡದೇವಿಯ ಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವರುಗಳ ಚಿತ್ರಗಳನ್ನು ಹಲವಾರು ಕಾರ್ಯಕ್ರಮಗಳಲ್ಲಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆಯನ್ನು ನೀಗಿಸಲು 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾದ ಡಿ.ಮಹೇಂದ್ರ ಅವರ ಅಧ್ಯಕ್ಷತೆಯ ಐದು ಜನರ ಈ ಸಮಿತಿಯು, ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಚಿತ್ರ ರಚಿಸುವಂತೆ ಕಲಾವಿದರಾದ ಸೋಮಶೇಖರ್.ಕೆ ಅವರಿಗೆ ಕೇಳಿತ್ತು. ಇದೀಗ ಅವರು ಸಮಿತಿ ಸೂಚನೆಯಂತೆ ಕಲಾವಿದರು ಚಿತ್ರವನ್ನು ರೂಪಿಸಿ ಸಮಿತಿಗೆ ಸಲ್ಲಿಸಿದ್ದಾರೆ.

ನಾಡದೇವತೆಯ ಚಿತ್ರದಲ್ಲಿ ಕರ್ನಾಟಕದ ನಕ್ಷೆ, ಮುಖದಲ್ಲಿ ಸ್ವಾಭಾವಿಕ ಸೌಂದರ್ಯ, ದೈವಿ ಭಾವ, ವಾಸ್ತವಿಕತೆಗೆ ಹತ್ತಿರವಾದ ಎರಡು ಕೈಗಳು, ಬಲಗೈಯಲ್ಲಿ ಅಭಯ ಮುದ್ರೆ, ಎಡಗೈಯಲ್ಲಿರುವ ತಾಳೆಗರಿ, ಕನ್ನಡ ಭಾಷಾ ಸಂಪತ್ತು ಇರುವುದನ್ನು ಕಾಣಬಹುದು.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಭವ್ಯವಾಗಿ ಕುಳಿತಿರುವ ನಾಡದೇವತೆ ಚಿತ್ರ, ಕನ್ನಡಾಭಿಮಾನದ ಸಂಕೇತವಾಗಿ ಕರ್ನಾಟಕದ ಧ್ವಜ, ಸಿರಿ ಸಂಪತ್ತಿನ ಸೂಚಕವಾಗಿ ಹಸಿರು ಸೀರೆ, ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು, ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಸಿಂಹ ಲಾಂಛನ, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ, ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ಹೊಯ್ಸಳ ಲಾಂಛನದ ಪದಕ, ಕಾಲಿನಲ್ಲಿ ಕಡಗ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು, ಪದತಲದಲ್ಲಿ ಕಮಲ ಇತ್ಯಾದಿ ಚಿತ್ರಣವನ್ನು ನಾಡದೇವತೆಯ ಚಿತ್ರದಲ್ಲಿ ಕಾಣಹುದು.

“ಹಿಂದೆ ರಚಿಸಿರುವ ಚಿತ್ರಗಳು ಸುಂದರವಾಗಿದ್ದರೂ, ಅಲ್ಲಿ ಕರ್ನಾಟಕದ ವೈಶಿಷ್ಟ್ಯತೆಯನ್ನು ಬಿಂಬಿಸುವಲ್ಲಿ ಕೊರತೆ ಎದ್ದು ಕಾಣುತ್ತಿತ್ತು. ಹೀಗಾಗಿ ಒಂದು ಅಧಿಕೃತ ಕರ್ನಾಟಕ ರಾಜ್ಯದ ನಾಡದೇವತೆಯ ಚಿತ್ರದ ಅವಶ್ಯಕತೆ ಹಿನ್ನೆಲೆಯಲ್ಲಿ ಸದರಿ ಚಿತ್ರವನ್ನು ರಚಿಸಲಾಗಿರುತ್ತದೆ” ಎಂದು ಸಮಿತಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...