Homeಕರ್ನಾಟಕನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

ನಾಡದೇವತೆಯ ಅಧಿಕೃತ ಚಿತ್ರ ಸರ್ಕಾರದ ಸಮಿತಿಗೆ ಕಲಾವಿದರಿಂದ ಸಲ್ಲಿಕೆ

- Advertisement -
- Advertisement -

ಕರ್ನಾಟಕದ ನಾಡದೇವತೆಯ ಅಧಿಕೃತ ಚಿತ್ರವೊಂದನ್ನು ಸಲ್ಲಿಸುವಂತೆ ನೇಮಿಸಲಾಗಿದ್ದ ಚಿತ್ರಕಲಾವಿದರ ಸಮಿತಿಗೆ ನಿಯೋಜಿತ ಕಲಾವಿದರು ದೇವಿಯ ಚಿತ್ರವನ್ನು ಹಸ್ತಾಂತರಿಸಿದ್ದಾರೆ. ಸರ್ಕಾರದಿಂದ ನೇಮಿಸಲಾಗಿದ್ದ ಸಮಿತಿ ಈ ಚಿತ್ರವನ್ನು ಮೊದಲು ಅಂಗೀಕರಿಸುತ್ತದೆ. ನಂತರವಷ್ಟೇ ಸರ್ಕಾರದ ಒಪ್ಪಿಗೆಗೆ ಕಳುಹಿಸಲಾಗುತ್ತದೆ.

ನಾಡದೇವಿಯ ಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವರುಗಳ ಚಿತ್ರಗಳನ್ನು ಹಲವಾರು ಕಾರ್ಯಕ್ರಮಗಳಲ್ಲಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆಯನ್ನು ನೀಗಿಸಲು 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾದ ಡಿ.ಮಹೇಂದ್ರ ಅವರ ಅಧ್ಯಕ್ಷತೆಯ ಐದು ಜನರ ಈ ಸಮಿತಿಯು, ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಚಿತ್ರ ರಚಿಸುವಂತೆ ಕಲಾವಿದರಾದ ಸೋಮಶೇಖರ್.ಕೆ ಅವರಿಗೆ ಕೇಳಿತ್ತು. ಇದೀಗ ಅವರು ಸಮಿತಿ ಸೂಚನೆಯಂತೆ ಕಲಾವಿದರು ಚಿತ್ರವನ್ನು ರೂಪಿಸಿ ಸಮಿತಿಗೆ ಸಲ್ಲಿಸಿದ್ದಾರೆ.

ನಾಡದೇವತೆಯ ಚಿತ್ರದಲ್ಲಿ ಕರ್ನಾಟಕದ ನಕ್ಷೆ, ಮುಖದಲ್ಲಿ ಸ್ವಾಭಾವಿಕ ಸೌಂದರ್ಯ, ದೈವಿ ಭಾವ, ವಾಸ್ತವಿಕತೆಗೆ ಹತ್ತಿರವಾದ ಎರಡು ಕೈಗಳು, ಬಲಗೈಯಲ್ಲಿ ಅಭಯ ಮುದ್ರೆ, ಎಡಗೈಯಲ್ಲಿರುವ ತಾಳೆಗರಿ, ಕನ್ನಡ ಭಾಷಾ ಸಂಪತ್ತು ಇರುವುದನ್ನು ಕಾಣಬಹುದು.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಭವ್ಯವಾಗಿ ಕುಳಿತಿರುವ ನಾಡದೇವತೆ ಚಿತ್ರ, ಕನ್ನಡಾಭಿಮಾನದ ಸಂಕೇತವಾಗಿ ಕರ್ನಾಟಕದ ಧ್ವಜ, ಸಿರಿ ಸಂಪತ್ತಿನ ಸೂಚಕವಾಗಿ ಹಸಿರು ಸೀರೆ, ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು, ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಸಿಂಹ ಲಾಂಛನ, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ, ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ಹೊಯ್ಸಳ ಲಾಂಛನದ ಪದಕ, ಕಾಲಿನಲ್ಲಿ ಕಡಗ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು, ಪದತಲದಲ್ಲಿ ಕಮಲ ಇತ್ಯಾದಿ ಚಿತ್ರಣವನ್ನು ನಾಡದೇವತೆಯ ಚಿತ್ರದಲ್ಲಿ ಕಾಣಹುದು.

“ಹಿಂದೆ ರಚಿಸಿರುವ ಚಿತ್ರಗಳು ಸುಂದರವಾಗಿದ್ದರೂ, ಅಲ್ಲಿ ಕರ್ನಾಟಕದ ವೈಶಿಷ್ಟ್ಯತೆಯನ್ನು ಬಿಂಬಿಸುವಲ್ಲಿ ಕೊರತೆ ಎದ್ದು ಕಾಣುತ್ತಿತ್ತು. ಹೀಗಾಗಿ ಒಂದು ಅಧಿಕೃತ ಕರ್ನಾಟಕ ರಾಜ್ಯದ ನಾಡದೇವತೆಯ ಚಿತ್ರದ ಅವಶ್ಯಕತೆ ಹಿನ್ನೆಲೆಯಲ್ಲಿ ಸದರಿ ಚಿತ್ರವನ್ನು ರಚಿಸಲಾಗಿರುತ್ತದೆ” ಎಂದು ಸಮಿತಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...