Homeಮುಖಪುಟಪ್ರಧಾನಿ ಮೋದಿಯಿಂದ 5ಜಿ ಸೇವೆಗಳ ಅಧಿಕೃತ ಆರಂಭ

ಪ್ರಧಾನಿ ಮೋದಿಯಿಂದ 5ಜಿ ಸೇವೆಗಳ ಅಧಿಕೃತ ಆರಂಭ

- Advertisement -
- Advertisement -

ದೆಹಲಿಯಲ್ಲಿ ನಡೆಯುವ ಆರನೇ ಆವೃತ್ತಿಯ ‘ಇಂಡಿಯಾ ಮೊಬೈಲ್ ಕಾಂಗ್ರೆಸ್‌’ನಲ್ಲಿ 5ಜಿ ಟೆಲಿಫೋನಿ ಸೇವೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧಿಕೃತವಾಗಿ ಪ್ರಾರಂಭಿಸಲಿದ್ದಾರೆ. ಪ್ರಸ್ತುತ ಆಯ್ದ ನಗರಗಳಲ್ಲಿ ಇದು ಪ್ರಾರಂಭವಾಗಲಿದ್ದು, ಮುಂದಿನ ಒಂದೆರಡು ವರ್ಷಗಳಲ್ಲಿ ಇದು ಇಡೀ ದೇಶವನ್ನು ಹಂತಹಂತವಾಗಿ ಆವರಿಸಲಿದೆ.

ದೆಹಲಿಯ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1 ರಿಂದ 4 ವರೆಗೆ ‘ಇಂಡಿಯಾ ಮೊಬೈಲ್ ಕಾಂಗ್ರೆಸ್-2022’ ರ 6 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಈ ಬಹು ನಿರೀಕ್ಷಿತ ಸೇವೆಯನ್ನು ಪ್ರಾರಂಭಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

5ಜಿ ಪ್ರಾರಂಭದೊಂದಿಗೆ ಪೂರ್ಣವಾದ ಉತ್ತಮ ಗುಣಮಟ್ಟದ ವೀಡಿಯೊ ಅಥವಾ ಚಲನಚಿತ್ರವನ್ನು ಮೊಬೈಲ್‌ನಲ್ಲಿ ಕೆಲವೇ ಸೆಕೆಂಡುಗಳಲ್ಲಿ ಡೌನ್‌ಲೋಡ್ ಮಾಡಬಹುದಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿಯೂ ಕೂಡಾ ತುಂಬಾ ವೇಗಗಾಗಿ ಇಂಟರ್‌ನೆಟ್‌ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ಇತ್ತೀಚೆಗೆ ನಡೆದ 5ಜಿ ಟೆಲಿಕಾಂ ಸ್ಪೆಕ್ಟ್ರಮ್‌ನ ಭಾರತದ ಅತಿದೊಡ್ಡ ಹರಾಜು ದಾಖಲೆಯ 1.5 ಲಕ್ಷ ಕೋಟಿ ಬಿಡ್‌ಗಳನ್ನು ಸ್ವೀಕರಿಸಿದೆ. ಮುಖೇಶ್ ಅಂಬಾನಿಯ ಜಿಯೋ 88,078 ಕೋಟಿ ಬಿಡ್‌ನೊಂದಿಗೆ 5ಜಿ ಯನ್ನು ಪಡೆದುಕೊಂಡಿದ್ದಾರೆ.

ಕಡಿಮೆ ಅವಧಿಯಲ್ಲಿ ದೇಶದಾದ್ಯಂತ 5ಜಿ ಟೆಲಿಕಾಂ ಸೇವೆಗಳ 80% ಕವರೇಜ್ ಮಾಡುವ ಗುರಿಯನ್ನು ಸರ್ಕಾರ ನೀಡಿದೆ ಎಂದು ಒಕ್ಕೂಟ ಸರ್ಕಾರದ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಈ ಹಿಂದೆ ತಿಳಿಸಿದ್ದರು.

5ಜಿ ತಂತ್ರಜ್ಞಾನವು ಭಾರತಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು 2023 ಮತ್ತು 2040 ರ ನಡುವೆ ಭಾರತೀಯ ಆರ್ಥಿಕತೆಗೆ 36.4 ಟ್ರಿಲಿಯನ್ (455 ಶತಕೋಟಿ ಡಾಲರ್‌‌) ನಷ್ಟು ಪ್ರಯೋಜನವನ್ನು ನೀಡುವ ಸಾಧ್ಯತೆಯಿದೆ ಎಂದು ಮೊಬೈಲ್ ನೆಟ್‌ವರ್ಕ್ ಆಪರೇಟರ್‌ಗಳನ್ನು ಪ್ರತಿನಿಧಿಸುವ ಜಾಗತಿಕ ಉದ್ಯಮ ಸಂಸ್ಥೆಯ ಇತ್ತೀಚಿನ ವರದಿಯು ಅಂದಾಜಿಸಿದೆ.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2030 ರ ವೇಳೆಗೆ ಭಾರತದಲ್ಲಿನ ಒಟ್ಟು ಸಂಪರ್ಕಗಳ ಮೂರನೇ ಒಂದು ಭಾಗಕ್ಕಿಂತ ಹೆಚ್ಚು 5ಜಿ ಇರುತ್ತದೆ ಎಂದು ಅಂದಾಜಿಸಲಾಗಿದ್ದು, ಈ ವೇಳೆಗೆ 2G ಮತ್ತು 3G ಯ ಪಾಲು ಶೇಕಡಾ 10 ಕ್ಕಿಂತ ಕಡಿಮೆಯಾಗಲಿದೆ ಎಂದು GSMA (Global System for Mobile Communications) ವರದಿಯು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...