Homeಮುಖಪುಟಪ್ರಧಾನಿ ಮೋದಿಯಿಂದ 5ಜಿ ಸೇವೆಗಳ ಅಧಿಕೃತ ಆರಂಭ

ಪ್ರಧಾನಿ ಮೋದಿಯಿಂದ 5ಜಿ ಸೇವೆಗಳ ಅಧಿಕೃತ ಆರಂಭ

- Advertisement -
- Advertisement -

ದೆಹಲಿಯಲ್ಲಿ ನಡೆಯುವ ಆರನೇ ಆವೃತ್ತಿಯ ‘ಇಂಡಿಯಾ ಮೊಬೈಲ್ ಕಾಂಗ್ರೆಸ್‌’ನಲ್ಲಿ 5ಜಿ ಟೆಲಿಫೋನಿ ಸೇವೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧಿಕೃತವಾಗಿ ಪ್ರಾರಂಭಿಸಲಿದ್ದಾರೆ. ಪ್ರಸ್ತುತ ಆಯ್ದ ನಗರಗಳಲ್ಲಿ ಇದು ಪ್ರಾರಂಭವಾಗಲಿದ್ದು, ಮುಂದಿನ ಒಂದೆರಡು ವರ್ಷಗಳಲ್ಲಿ ಇದು ಇಡೀ ದೇಶವನ್ನು ಹಂತಹಂತವಾಗಿ ಆವರಿಸಲಿದೆ.

ದೆಹಲಿಯ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1 ರಿಂದ 4 ವರೆಗೆ ‘ಇಂಡಿಯಾ ಮೊಬೈಲ್ ಕಾಂಗ್ರೆಸ್-2022’ ರ 6 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಈ ಬಹು ನಿರೀಕ್ಷಿತ ಸೇವೆಯನ್ನು ಪ್ರಾರಂಭಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

5ಜಿ ಪ್ರಾರಂಭದೊಂದಿಗೆ ಪೂರ್ಣವಾದ ಉತ್ತಮ ಗುಣಮಟ್ಟದ ವೀಡಿಯೊ ಅಥವಾ ಚಲನಚಿತ್ರವನ್ನು ಮೊಬೈಲ್‌ನಲ್ಲಿ ಕೆಲವೇ ಸೆಕೆಂಡುಗಳಲ್ಲಿ ಡೌನ್‌ಲೋಡ್ ಮಾಡಬಹುದಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿಯೂ ಕೂಡಾ ತುಂಬಾ ವೇಗಗಾಗಿ ಇಂಟರ್‌ನೆಟ್‌ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ಇತ್ತೀಚೆಗೆ ನಡೆದ 5ಜಿ ಟೆಲಿಕಾಂ ಸ್ಪೆಕ್ಟ್ರಮ್‌ನ ಭಾರತದ ಅತಿದೊಡ್ಡ ಹರಾಜು ದಾಖಲೆಯ 1.5 ಲಕ್ಷ ಕೋಟಿ ಬಿಡ್‌ಗಳನ್ನು ಸ್ವೀಕರಿಸಿದೆ. ಮುಖೇಶ್ ಅಂಬಾನಿಯ ಜಿಯೋ 88,078 ಕೋಟಿ ಬಿಡ್‌ನೊಂದಿಗೆ 5ಜಿ ಯನ್ನು ಪಡೆದುಕೊಂಡಿದ್ದಾರೆ.

ಕಡಿಮೆ ಅವಧಿಯಲ್ಲಿ ದೇಶದಾದ್ಯಂತ 5ಜಿ ಟೆಲಿಕಾಂ ಸೇವೆಗಳ 80% ಕವರೇಜ್ ಮಾಡುವ ಗುರಿಯನ್ನು ಸರ್ಕಾರ ನೀಡಿದೆ ಎಂದು ಒಕ್ಕೂಟ ಸರ್ಕಾರದ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಈ ಹಿಂದೆ ತಿಳಿಸಿದ್ದರು.

5ಜಿ ತಂತ್ರಜ್ಞಾನವು ಭಾರತಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು 2023 ಮತ್ತು 2040 ರ ನಡುವೆ ಭಾರತೀಯ ಆರ್ಥಿಕತೆಗೆ 36.4 ಟ್ರಿಲಿಯನ್ (455 ಶತಕೋಟಿ ಡಾಲರ್‌‌) ನಷ್ಟು ಪ್ರಯೋಜನವನ್ನು ನೀಡುವ ಸಾಧ್ಯತೆಯಿದೆ ಎಂದು ಮೊಬೈಲ್ ನೆಟ್‌ವರ್ಕ್ ಆಪರೇಟರ್‌ಗಳನ್ನು ಪ್ರತಿನಿಧಿಸುವ ಜಾಗತಿಕ ಉದ್ಯಮ ಸಂಸ್ಥೆಯ ಇತ್ತೀಚಿನ ವರದಿಯು ಅಂದಾಜಿಸಿದೆ.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2030 ರ ವೇಳೆಗೆ ಭಾರತದಲ್ಲಿನ ಒಟ್ಟು ಸಂಪರ್ಕಗಳ ಮೂರನೇ ಒಂದು ಭಾಗಕ್ಕಿಂತ ಹೆಚ್ಚು 5ಜಿ ಇರುತ್ತದೆ ಎಂದು ಅಂದಾಜಿಸಲಾಗಿದ್ದು, ಈ ವೇಳೆಗೆ 2G ಮತ್ತು 3G ಯ ಪಾಲು ಶೇಕಡಾ 10 ಕ್ಕಿಂತ ಕಡಿಮೆಯಾಗಲಿದೆ ಎಂದು GSMA (Global System for Mobile Communications) ವರದಿಯು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...