Homeಕರ್ನಾಟಕಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಇಂದು (ರವಿವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ಕೊಟ್ಟಿದ್ಧಾರೆ. ಕೋಲಾರದ ಭಾಷಣದ ಕಾರಕ್ಕಾಗಿಯೇ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹರಾಗಿದ್ದಾರೆ. ಇದೇ ಅದೇ ಕೋಲಾರದಿಂದ ರಾಹುಲ್ ಗಾಂಧಿ ಅವರ ಪ್ರಚಾರ ಅಭಿಯಾನ ಶುರುವಾಗಿದೆ.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಕರ್ನಾಟಕದ ಜನತೆಗೆ ಈಗಾಗಲೇ 4 ಭರವಸೆಯನ್ನು ನೀಡಿದ್ದೇವೆ.  ಮನೆ ಯಜಮಾನರಿಗೆ 2 ಸಾವಿರ ರೂ ಹಾಗೂ 200 ಯೂನಿಟ್ ಉಚಿತ ವಿದ್ಯುತ್, ಉಚಿತವಾಗಿ 10 ಕೆಜಿ ಅಕ್ಕಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಕೆಲಸ, ಡಿಪ್ಲೊಮಾ ಪದವೀಧರರಿಗೆ 1,500 ರೂ., ಪದವೀಧರರಿಗೆ 3000 ಸಾವಿರ ರೂ ನೀಡಲಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಬೇಡಿಕೆಯನ್ನು ಈಡೇರಿಸುತ್ತೇವೆ, ನಾವು ಜನರ ಪರವಾಗಿ ಕೆಲಸ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ರಾಜ್ಯ ಬಿಜೆಪಿ ಸರ್ಕಾರವನ್ನು ಶೇ. 40ರಷ್ಟು ಕಮಿಷನ್ ಸರ್ಕಾರ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಅವರು ಮಾಡಿದ ಅಭಿವೃದ್ದಿ ಕೆಲಸಗಳೇನು? ಎಲ್ಲಾ ಅಭಿವೃದ್ಧಿ ಕೆಲಸಗಳಲ್ಲಿ ಕಮೀಷನ್ ಪಡೆಯುವುದು, ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿದೆ. ಅವರು ಲೂಟಿ ಹೊಡೆಯಲು ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

ಸಮಾವೇಶದಲ್ಲಿ 1 ಲಕ್ಷ ಜನರು ಸೇರಿದ್ದಾರೆ, 2019ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಹಿನ್ನೆಲೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹಾಗೆಯೇ ಇಲ್ಲಿಂದಲೇ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ನನಗೆ ಮುಖ್ಯಮಂತ್ರಿ ಸ್ಥಾನ ಬೇಡ: ಖರ್ಗೆ ಸ್ಪಷ್ಟನೆ

ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ”ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

”ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್​ ಕಲರ್​ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ” ಎಂದರು.

”ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಅನೇಕ ಜನರನ್ನು ಭೇಟಿಯಾಗಿ ಜನರ ದುಃಖ ದುಮ್ಮಾನ ಕೇಳಿದ್ದಾರೆ ಎಂದು ಹೇಳಿದ ಖರ್ಗೆ, ಕೋಲಾರ ಜಿಲ್ಲೆ ಬಂಗಾರದ ಜಿಲ್ಲೆ. ಮೂರೇ ಮೂರು ಬಂಗಾರದ ಗಣಿಗಳು ಕರ್ನಾಟಕದಲ್ಲೇ ಇವೆ. ಇಡೀ ದೇಶದ ಬಂಗಾರ ಇರೋದು ಸಿಗುವುದು ಇಲ್ಲಿಂದಲೇ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾದ ಜಿಲ್ಲೆ ನೀರಾವರಿಗಾಗಲಿ ಕೃಷಿ ಗಾಗಲಿ ಅಷ್ಟೊಂದು ಮಹತ್ವ ಕೊಡುತ್ತಾ ಇರಲಿಲ್ಲ. ಅನೇಕ ಶಾಸಕರು ಒಗ್ಗಟ್ಟಾಗಿ ಕಾಂಗ್ರೆಸ್ ಸರ್ಕಾರ ಇದ್ದಾಗ ಕೆರೆಗಳನ್ನು ತುಂಬಿಸಿದ್ದು ಕಾಂಗ್ರೆಸ್ ಪಕ್ಷ. ಲಕ್ಷಾಂತರ ಎಕರೆ ಇದರಿಂದ ನೀರಾವರಿ ಆಗುತ್ತಿದೆ” ಎಂದರು.

”ರೇಷ್ಮೆಗೂ ಪ್ರಸಿದ್ಧ ಬಂಗಾರಕ್ಕೂ ಪ್ರಸಿದ್ಧವಾಗಿರುವ ಜಿಲ್ಲೆಯಿಂದ ಕಾಂಗ್ರೆಸ್ ಪ್ರಚಾರ ಪ್ರಾರಂಭ ಮಾಡಿದ್ದೇವೆ. ಇಲ್ಲಿಂದ ಯಶಸ್ಸು ಖಚಿತವಾಗಲಿದೆ ಎಂದು ಹೇಳಿದ ಖರ್ಗೆ, 40 ಪರ್ಸೆಂಟ್ ಸರ್ಕಾರದ ಮೇಲೆ ಜನ ರೊಚ್ಚಿಗೆದ್ದು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ. ಸ್ವಯಂ ಪ್ರೇರಿತರಾಗಿ ಜನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದು ನಮಗೆ ಲಾಭ ಇದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...