Homeಕರ್ನಾಟಕಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಇಂದು (ರವಿವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ಕೊಟ್ಟಿದ್ಧಾರೆ. ಕೋಲಾರದ ಭಾಷಣದ ಕಾರಕ್ಕಾಗಿಯೇ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹರಾಗಿದ್ದಾರೆ. ಇದೇ ಅದೇ ಕೋಲಾರದಿಂದ ರಾಹುಲ್ ಗಾಂಧಿ ಅವರ ಪ್ರಚಾರ ಅಭಿಯಾನ ಶುರುವಾಗಿದೆ.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಕರ್ನಾಟಕದ ಜನತೆಗೆ ಈಗಾಗಲೇ 4 ಭರವಸೆಯನ್ನು ನೀಡಿದ್ದೇವೆ.  ಮನೆ ಯಜಮಾನರಿಗೆ 2 ಸಾವಿರ ರೂ ಹಾಗೂ 200 ಯೂನಿಟ್ ಉಚಿತ ವಿದ್ಯುತ್, ಉಚಿತವಾಗಿ 10 ಕೆಜಿ ಅಕ್ಕಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಕೆಲಸ, ಡಿಪ್ಲೊಮಾ ಪದವೀಧರರಿಗೆ 1,500 ರೂ., ಪದವೀಧರರಿಗೆ 3000 ಸಾವಿರ ರೂ ನೀಡಲಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಬೇಡಿಕೆಯನ್ನು ಈಡೇರಿಸುತ್ತೇವೆ, ನಾವು ಜನರ ಪರವಾಗಿ ಕೆಲಸ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ರಾಜ್ಯ ಬಿಜೆಪಿ ಸರ್ಕಾರವನ್ನು ಶೇ. 40ರಷ್ಟು ಕಮಿಷನ್ ಸರ್ಕಾರ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಅವರು ಮಾಡಿದ ಅಭಿವೃದ್ದಿ ಕೆಲಸಗಳೇನು? ಎಲ್ಲಾ ಅಭಿವೃದ್ಧಿ ಕೆಲಸಗಳಲ್ಲಿ ಕಮೀಷನ್ ಪಡೆಯುವುದು, ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿದೆ. ಅವರು ಲೂಟಿ ಹೊಡೆಯಲು ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

ಸಮಾವೇಶದಲ್ಲಿ 1 ಲಕ್ಷ ಜನರು ಸೇರಿದ್ದಾರೆ, 2019ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಹಿನ್ನೆಲೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹಾಗೆಯೇ ಇಲ್ಲಿಂದಲೇ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ನನಗೆ ಮುಖ್ಯಮಂತ್ರಿ ಸ್ಥಾನ ಬೇಡ: ಖರ್ಗೆ ಸ್ಪಷ್ಟನೆ

ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ”ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

”ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್​ ಕಲರ್​ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ” ಎಂದರು.

”ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಅನೇಕ ಜನರನ್ನು ಭೇಟಿಯಾಗಿ ಜನರ ದುಃಖ ದುಮ್ಮಾನ ಕೇಳಿದ್ದಾರೆ ಎಂದು ಹೇಳಿದ ಖರ್ಗೆ, ಕೋಲಾರ ಜಿಲ್ಲೆ ಬಂಗಾರದ ಜಿಲ್ಲೆ. ಮೂರೇ ಮೂರು ಬಂಗಾರದ ಗಣಿಗಳು ಕರ್ನಾಟಕದಲ್ಲೇ ಇವೆ. ಇಡೀ ದೇಶದ ಬಂಗಾರ ಇರೋದು ಸಿಗುವುದು ಇಲ್ಲಿಂದಲೇ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾದ ಜಿಲ್ಲೆ ನೀರಾವರಿಗಾಗಲಿ ಕೃಷಿ ಗಾಗಲಿ ಅಷ್ಟೊಂದು ಮಹತ್ವ ಕೊಡುತ್ತಾ ಇರಲಿಲ್ಲ. ಅನೇಕ ಶಾಸಕರು ಒಗ್ಗಟ್ಟಾಗಿ ಕಾಂಗ್ರೆಸ್ ಸರ್ಕಾರ ಇದ್ದಾಗ ಕೆರೆಗಳನ್ನು ತುಂಬಿಸಿದ್ದು ಕಾಂಗ್ರೆಸ್ ಪಕ್ಷ. ಲಕ್ಷಾಂತರ ಎಕರೆ ಇದರಿಂದ ನೀರಾವರಿ ಆಗುತ್ತಿದೆ” ಎಂದರು.

”ರೇಷ್ಮೆಗೂ ಪ್ರಸಿದ್ಧ ಬಂಗಾರಕ್ಕೂ ಪ್ರಸಿದ್ಧವಾಗಿರುವ ಜಿಲ್ಲೆಯಿಂದ ಕಾಂಗ್ರೆಸ್ ಪ್ರಚಾರ ಪ್ರಾರಂಭ ಮಾಡಿದ್ದೇವೆ. ಇಲ್ಲಿಂದ ಯಶಸ್ಸು ಖಚಿತವಾಗಲಿದೆ ಎಂದು ಹೇಳಿದ ಖರ್ಗೆ, 40 ಪರ್ಸೆಂಟ್ ಸರ್ಕಾರದ ಮೇಲೆ ಜನ ರೊಚ್ಚಿಗೆದ್ದು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ. ಸ್ವಯಂ ಪ್ರೇರಿತರಾಗಿ ಜನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದು ನಮಗೆ ಲಾಭ ಇದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...