Homeಕರ್ನಾಟಕಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಇಂದು (ರವಿವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ಕೊಟ್ಟಿದ್ಧಾರೆ. ಕೋಲಾರದ ಭಾಷಣದ ಕಾರಕ್ಕಾಗಿಯೇ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹರಾಗಿದ್ದಾರೆ. ಇದೇ ಅದೇ ಕೋಲಾರದಿಂದ ರಾಹುಲ್ ಗಾಂಧಿ ಅವರ ಪ್ರಚಾರ ಅಭಿಯಾನ ಶುರುವಾಗಿದೆ.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಕರ್ನಾಟಕದ ಜನತೆಗೆ ಈಗಾಗಲೇ 4 ಭರವಸೆಯನ್ನು ನೀಡಿದ್ದೇವೆ.  ಮನೆ ಯಜಮಾನರಿಗೆ 2 ಸಾವಿರ ರೂ ಹಾಗೂ 200 ಯೂನಿಟ್ ಉಚಿತ ವಿದ್ಯುತ್, ಉಚಿತವಾಗಿ 10 ಕೆಜಿ ಅಕ್ಕಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಕೆಲಸ, ಡಿಪ್ಲೊಮಾ ಪದವೀಧರರಿಗೆ 1,500 ರೂ., ಪದವೀಧರರಿಗೆ 3000 ಸಾವಿರ ರೂ ನೀಡಲಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಬೇಡಿಕೆಯನ್ನು ಈಡೇರಿಸುತ್ತೇವೆ, ನಾವು ಜನರ ಪರವಾಗಿ ಕೆಲಸ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ರಾಜ್ಯ ಬಿಜೆಪಿ ಸರ್ಕಾರವನ್ನು ಶೇ. 40ರಷ್ಟು ಕಮಿಷನ್ ಸರ್ಕಾರ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಅವರು ಮಾಡಿದ ಅಭಿವೃದ್ದಿ ಕೆಲಸಗಳೇನು? ಎಲ್ಲಾ ಅಭಿವೃದ್ಧಿ ಕೆಲಸಗಳಲ್ಲಿ ಕಮೀಷನ್ ಪಡೆಯುವುದು, ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿದೆ. ಅವರು ಲೂಟಿ ಹೊಡೆಯಲು ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

ಸಮಾವೇಶದಲ್ಲಿ 1 ಲಕ್ಷ ಜನರು ಸೇರಿದ್ದಾರೆ, 2019ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಹಿನ್ನೆಲೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹಾಗೆಯೇ ಇಲ್ಲಿಂದಲೇ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ನನಗೆ ಮುಖ್ಯಮಂತ್ರಿ ಸ್ಥಾನ ಬೇಡ: ಖರ್ಗೆ ಸ್ಪಷ್ಟನೆ

ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ”ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

”ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್​ ಕಲರ್​ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ” ಎಂದರು.

”ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಅನೇಕ ಜನರನ್ನು ಭೇಟಿಯಾಗಿ ಜನರ ದುಃಖ ದುಮ್ಮಾನ ಕೇಳಿದ್ದಾರೆ ಎಂದು ಹೇಳಿದ ಖರ್ಗೆ, ಕೋಲಾರ ಜಿಲ್ಲೆ ಬಂಗಾರದ ಜಿಲ್ಲೆ. ಮೂರೇ ಮೂರು ಬಂಗಾರದ ಗಣಿಗಳು ಕರ್ನಾಟಕದಲ್ಲೇ ಇವೆ. ಇಡೀ ದೇಶದ ಬಂಗಾರ ಇರೋದು ಸಿಗುವುದು ಇಲ್ಲಿಂದಲೇ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾದ ಜಿಲ್ಲೆ ನೀರಾವರಿಗಾಗಲಿ ಕೃಷಿ ಗಾಗಲಿ ಅಷ್ಟೊಂದು ಮಹತ್ವ ಕೊಡುತ್ತಾ ಇರಲಿಲ್ಲ. ಅನೇಕ ಶಾಸಕರು ಒಗ್ಗಟ್ಟಾಗಿ ಕಾಂಗ್ರೆಸ್ ಸರ್ಕಾರ ಇದ್ದಾಗ ಕೆರೆಗಳನ್ನು ತುಂಬಿಸಿದ್ದು ಕಾಂಗ್ರೆಸ್ ಪಕ್ಷ. ಲಕ್ಷಾಂತರ ಎಕರೆ ಇದರಿಂದ ನೀರಾವರಿ ಆಗುತ್ತಿದೆ” ಎಂದರು.

”ರೇಷ್ಮೆಗೂ ಪ್ರಸಿದ್ಧ ಬಂಗಾರಕ್ಕೂ ಪ್ರಸಿದ್ಧವಾಗಿರುವ ಜಿಲ್ಲೆಯಿಂದ ಕಾಂಗ್ರೆಸ್ ಪ್ರಚಾರ ಪ್ರಾರಂಭ ಮಾಡಿದ್ದೇವೆ. ಇಲ್ಲಿಂದ ಯಶಸ್ಸು ಖಚಿತವಾಗಲಿದೆ ಎಂದು ಹೇಳಿದ ಖರ್ಗೆ, 40 ಪರ್ಸೆಂಟ್ ಸರ್ಕಾರದ ಮೇಲೆ ಜನ ರೊಚ್ಚಿಗೆದ್ದು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ. ಸ್ವಯಂ ಪ್ರೇರಿತರಾಗಿ ಜನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದು ನಮಗೆ ಲಾಭ ಇದೆ” ಎಂದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...