Homeಮುಖಪುಟಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

- Advertisement -
- Advertisement -

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಧಾಬಾ ಗ್ರಾಮದಲ್ಲಿ ಶಾಲೆಯನ್ನು ನಿರ್ಮಿಸಲು ಅಬ್ದುಲ್ ನಯೀಮ್ ಎಂಬ ನಿವಾಸಿ ಸುಮಾರು 20 ಲಕ್ಷ ರೂಪಾಯಿಗಳನ್ನು ಸಾಲವಾಗಿ ಪಡೆದ ಹಣ ಮತ್ತು ಕುಟುಂಬದ ಉಳಿತಾಯದಿಂದ ಹೂಡಿಕೆ ಮಾಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಸಾಲವಾಗಿ ಪಡೆದ 20 ಲಕ್ಷ ರೂಪಾಯಿ ಮತ್ತು ಕುಟುಂಬದ ಉಳಿತಾಯ ಹಣವನ್ನು ವ್ಯಯಿಸಿ ಧಾಬಾ ಗ್ರಾಮದಲ್ಲಿ ಅಬ್ದುಲ್ ನಯೀಮ್ ಎಂಬವರು ಶಾಲೆ ನಿರ್ಮಿಸುತ್ತಿದ್ದರು. ಧಾಬಾ ಗ್ರಾಮ ಮತ್ತು ಸುತ್ತಮುತ್ತಲಿನ ಆದಿವಾಸಿ ಹಳ್ಳಿಗಳ ಕುಟುಂಬಗಳು ತಮ್ಮ ಮಕ್ಕಳನ್ನು ಹಲವಾರು ಕಿಲೋಮೀಟರ್ ದೂರದ ಶಾಲೆಗಳಿಗೆ ಕಳುಹಿಸಬೇಕಾಗಿರುವುದರಿಂದ, ನಯೀಮ್ ಅವರು ನರ್ಸರಿಯಿಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗಾಗಿ ಶಾಲೆಯನ್ನು ನಿರ್ಮಿಸುತ್ತಿದ್ದರು. ಡಿಸೆಂಬರ್ 30ರಂದು ಅವರು ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಕಳೆದ ವಾರದಿಂದ ಆ ಪ್ರದೇಶದಲ್ಲಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಲು ಪ್ರಾರಂಭಿಸಿದ್ದವು ಎಂದು ವರದಿ ಉಲ್ಲೇಖಿಸಿದೆ.

“ನನ್ನ ಹಳ್ಳಿಯ ಪ್ರಗತಿ ಮತ್ತು ಮಕ್ಕಳಿಗೆ ಅಧ್ಯಯನ ಮಾಡಲು ಸುಲಭವಾಗಲೆಂದು ನನ್ನ ಖಾಸಗಿ ಭೂಮಿಯಲ್ಲಿ ಶಾಲೆ ನಿರ್ಮಿಸಲು ನಿರ್ಧರಿಸಿದ್ದೆ. ಆದರೆ, ನಾವು ಇಲ್ಲಿ ಅಕ್ರಮ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಗ್ರಾಮದಲ್ಲಿ ಕೇವಲ 3 ಮುಸ್ಲಿಂ ಮನೆಗಳಿವೆ. ಹೀಗಿರುವಾಗ ಇಲ್ಲಿ ಮದ್ರಸಾ ನಿರ್ಮಿಸಲು ಹೇಗೆ ಸಾಧ್ಯ? ಇನ್ನು ಇಲ್ಲಿ ಕಟ್ಟಡದ ಕೆಲಸ ಪೂರ್ಣಗೊಂಡಿರಲಿಲ್ಲ. ತರಗತಿ ಪ್ರಾರಂಭಗೊಂಡು, ಮಕ್ಕಳೂ ಇರಲಿಲ್ಲ” ಎಂದು ನಯೀಮ್ ಹೇಳಿದ್ದಾರೆ.

ಭಾನುವಾರ, ಪಂಚಾಯತ್ ನಯೀಮ್‌ಗೆ ಶಾಲೆಯನ್ನು ಕೆಡವಲು ಆದೇಶಿಸಿ ನೋಟಿಸ್ ನೀಡಿತ್ತು. ಕಟ್ಟಡವನ್ನು ನಿರ್ಮಿಸಲು ನಿಮಗೆ ಅನುಮತಿ ಇಲ್ಲ ಎಂದು ಹೇಳಿತ್ತು. ಪಂಚಾಯತ್ ಕಚೇರಿಯ ಅಧಿಕಾರಿಗಳು ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ನಿರಾಕರಿಸಿದ್ದರು ಮತ್ತು ಹಿಂತಿರುಗಲು ಹೇಳಿದ್ದರು ಎಂದು ಆರೋಪಿಸಲಾಗಿದೆ.

ಸ್ಥಳೀಯ ನಿವಾಸಿಗಳ ಪ್ರತಿಭಟನೆಯ ನಂತರ, ಪಂಚಾಯತ್ ಸೋಮವಾರ ಶಾಲೆಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿರ್ಮಾಣವಾಗುತ್ತಿದ್ದ ಕಟ್ಟಡ ಅನಧಿಕೃತ ಮದ್ರಸಾ ಎಂದು ಆರೋಪಿಸಿ ಯಾವುದೇ ದೂರುಗಳು ಬಂದಿಲ್ಲ ಎಂದು ಸರ್ಪಂಚ್ ಹೇಳಿದ್ದರು ಎಂದಿದೆ.

ಆದಾಗ್ಯೂ, ಮಂಗಳವಾರ, ನಯೀಮ್ ಮತ್ತು ಕೆಲವು ಗ್ರಾಮಸ್ಥರು ಈ ವಿಷಯದ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಹೋದಾಗ, ಪಂಚಾಯತ್ ಆಡಳಿತವು ಶಾಲಾ ಕಟ್ಟಡದ ಕೆಲ ಭಾಗಗಳನ್ನು ಕೆಡವಿದೆ.

ಅತಿಕ್ರಮಣ ಮತ್ತು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಪಂಚಾಯತ್ ನೀಡಿದ ದೂರಿನ ಮೇರೆಗೆ ಆಡಳಿತವು ಕ್ರಮ ಕೈಗೊಂಡಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅಜಿತ್ ಮರಾವಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಪರಿಶೀಲನೆಯಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದ ಒಂದು ಭಾಗ ಅತಿಕ್ರಮಣ ಎಂದು ಕಂಡುಬಂದಿದೆ” ಎಂದು ಮರಾವಿ ಹೇಳಿದ್ದಾರೆ. “ಇಡೀ ಕಟ್ಟಡವನ್ನು ಕೆಡವಿಲ್ಲ, ಅಕ್ರಮ ಭಾಗವನ್ನು ಮಾತ್ರ ತೆಗೆದುಹಾಕಲಾಗಿದೆ” ಎಂದು ಮರಾವಿ ತಿಳಿಸಿದ್ದಾರೆ. ಎಲ್ಲಾ ಅನುಮತಿಗಳನ್ನು ಪಡೆಯಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ನನ್ನ ಬಳಿ ಪಂಚಾಯತ್ ಎನ್‌ಒಸಿ ಇತ್ತು” ಎಂದು ನಯೀಮ್ ಹೇಳಿರುವುದಾಗಿ ವರದಿಯಾಗಿದೆ. ಅವರು ಶಾಲೆಯ ಅನುಮೋದನೆಗೆ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಪಂಚಾಯತ್ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡದ ಕಾರಣ ಕಟ್ಟಡವನ್ನು ಕೆಡವಲಾಗುವುದು ಎಂದು ತಿಳಿಸಲಾಗಿತ್ತು ಎಂದು ನಯೀಮ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...