Homeಕರ್ನಾಟಕನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಈ ರೀತಿ ಹೇಳಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಎಂದರು.

ಸರ್ಕಾರ ಬಂದು 8 ತಿಂಗಳಾಗಿದೆ. ಡಿಸಿ, ಸಿಇಒ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ಕೆಲವೆಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ? ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಕೆಲವರಿಗೆ ಮಾತ್ರ ಗ್ಯಾರಂಟಿಗಳ ಅನುಕೂಲ ತಲುಪಿಲ್ಲ. ಆ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು.

ತೆರಿಗೆ ಇಲಾಖೆ, ತಹಶೀಲ್ದಾರ್, ಎಸಿ ಹಾಗೂ ಡಿಸಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, ಎಸಿ, ಡಿಸಿ ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ? ಎಂದು ಸಿಎಂ ಪ್ರಶ್ನಿಸಿದರು.

ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ ಎನ್ನುವ ಸೂಚನೆ ನೀಡಿದರು.

ಎಷ್ಟು ಕಚೇರಿ, ಹಾಸ್ಟೆಲ್‌, ಠಾಣೆ ಮತ್ತು ಶಾಲೆಗಳಿಗೆ, ಭೇಟಿ ನೀಡಿದ್ದೀರಿ ಎನ್ನು ವಿವರಗಳನ್ನು ಪಡೆದುಕೊಂಡರು. ಕೋಲಾರದ ಹಾಸ್ಟೆಲ್‌ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ನೀವು ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲಿನ‌ ಅಧಿಕಾರಿಗಳು- ಫಲಾನುಭವಿಗಳ ಜೊತೆ ಸಂಪರ್ಕ, ಸಂಬಂಧ ಇನ್ನಷ್ಟು ಹೆಚ್ಚು ಹೆಚ್ಚು ಏರ್ಪಡಬೇಕು. ಜನರು ಹೆಚ್ಚು ಹೋಗೋದು ಕೃಷಿ, ಕಂದಾಯ ಇಲಾಖೆ ಕಚೇರಿಗಳು ಮತ್ತು ಪೊಲೀಸ್ ಠಾಣೆಗಳಿಗೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ದತೆ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಕರ್ತವ್ಯಲೋಪ, ನಿರ್ಲಕ್ಷ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ನೀವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದೇ ಹೋದರೆ, ಜಿಲ್ಲಾ ಮಟ್ಟದಲ್ಲಿ ಹೇಗೆ ಶಿಸ್ತು ತರುತ್ತೀರಿ ಎಂದು ಸಿಎಂ ಕೇಳಿದರು.

ಇದನ್ನೂ ಓದಿ: ಮೊದಲ ವರದಿ ಸಲ್ಲಿಸಿದ ಎಸ್‌ಇಪಿ ಆಯೋಗ: ಮೂರು ವರ್ಷಗಳ ಪದವಿಗೆ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...