Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...