Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...