Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...