Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...