Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...