Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...