Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...