Homeಅಂಕಣಗಳುಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

- Advertisement -
- Advertisement -

ಕಾನೂನುಗಳಿಗಿಂತ ನನ್ನ ಧರ್ಮವೇ ದೊಡ್ಡದು, ಆದ್ದರಿಂದ ನಾನು ಕಾನೂನುಗಳಿಗೆ ಹೆದರುವುದಿಲ್ಲ ಎಂಬಂತಹ ಮಾತೊಂದು ಪತ್ರಿಕೆಗಳಲ್ಲಿ ಹರಿದಾಡಿದಾಗ ಗ್ಯಾರಂಟಿ ಈ ಮಾತನ್ನು ತಾಲೀಬಾನಿಗಳು ಆಡಿರಬಹುದು ಅಥವ ಯಾವುದಾದರೂ ಮೂಲಭೂತಾವಾದಿ ಸಂಘಟನೆಯ ಲೀಡರು ಆಡಿರಬಹುದೆಂದು ಅಷ್ಟೇನು ಗಾಬರಿಯಿಲ್ಲದೆ ಹುಡುಕಿದಾಗ ಈ ಮಾತನ್ನಾಡಿದವರು ನಮ್ಮ ಶರಣ ಪರಂಪರೆಯ ಪ್ರಖರ ವಿಚಾರವಾದಿ ಸ್ವಾಮಿಜಿಯೊಬ್ಬರು ಎಂಬುದು ಗೊತ್ತಾದಾಗ ಏರಿ ನೀರುಂಬೊಡೆ, ಬೇಲಿ ಹೊಲ ಮೇಯ್ದೊಡೆ, ನಾರಿ ತನ್ನ ಮನೆಯಲ್ಲಿ ಕದ್ದೊಡೆ ಬದುಕುವುದೇನಯ್ಯ ಎಂಬಂತಾಯ್ತಲ್ಲಾ.

ಮಧ್ಯ ಕರ್ನಾಟಕದ ಒಂದೆರಡು ಜಿಲ್ಲಾ ಪ್ರದೇಶದಲ್ಲಿ ಗೊತ್ತಿರುವ ಜಗದ್ಗುರುವೊಬ್ಬರು ಹೀಗೆ ಮಾತಾಡುತ್ತಿರಬೇಕಾದರೆ, ಅವರು ಕಾನೂನು ಮೀರಿ ಬಹಳ ವರ್ಷಗಳೇ ಆಗಿರಬೇಕು. ಮಠದ ಸಂವಿಧಾನದ ಪ್ರಕಾರ ಅರವತ್ತು ವರ್ಷಕ್ಕೆ ನಿವೃತ್ತಿ ಪಡೆದು, ಮರಿ ಸ್ವಾಮಿಗೆ ಪಟ್ಟಕಟ್ಟಿ ತಾವು ಪಕ್ಕದಲ್ಲಿ ನಿಲ್ಲಬೇಕಿತ್ತು. ಆದರೆ ಮಠದ ಪರಂಪರೆ ಬದಿಗೊತ್ತಿ, ಅರವತ್ತು ವರ್ಷವನ್ನ ಹಿಂದಿಕ್ಕಿ ಮುಂದುವರಿದ ಜಗದ್ಗುರುವಿನ ನಡೆಗೆ ಬೇಸತ್ತ ಭಕ್ತಾದಿಗಳು ಕಾನೂನು ಮೊರೆಹೋಗಿದ್ದಾರಂತಲ್ಲಾ! ಅದಕ್ಕೆ ಹೆದರಿದ ಜಗದ್ಗುರು ನಾನು ಕಾನೂನಿಗೆ ಹೆದರುವುದಿಲ್ಲ ಎಂದರಂತಲ್ಲಾ ಥೂತ್ತೇರಿ.

ಈ ನೆಲದ ಕಾನೂನಿಗಾಗಲಿ ಮಠದ ಕಾನೂನಿಗಾಗಲಿ ಹೆದರುವುದಿಲ್ಲ ಎಂದಮೇಲೆ ಭಂಡತನ ಆವರಿಸುತ್ತೆ. ಆನಂತರ ಮಾಡುವ ಎಲ್ಲ ಕೆಲಸಗಳು ಭಂಡತನದಿಂದಲೇ ಕೂಡಿರುತ್ತವೆ. ಬಹು ಹಿಂದೆ ಜಗದ್ಗುರುಗಳೇ ಬಿಗಿದ ಭಾಷಣವಿದು. ಆ ಮಾತಿನ ಪ್ರಯೋಗಕ್ಕಿಳಿದಂತಿರುವ ಜಗದ್ಗುರುಗಳು ಮಠದ ಆಸ್ತಿಯನ್ನೇ ಸ್ವಂತದ ಆಸ್ತಿಯನ್ನಾಗಿ ಮಾಡಿಕೊಳ್ಳುತ್ತ ಅದನ್ನ ದಕ್ಕಿಸಿಕೊಳ್ಳಲು ಟ್ರಸ್ಟು ಮಾಡಿಕೊಂಡು, ಪ್ರತಿಭಟಿಸುವಂತಹ ಭಕ್ತಾದಿಗಳನ್ನು ಬೆದರಿಸಲು ಶಿವಸೈನ್ಯವನ್ನೇ ಕಟ್ಟಿದ್ದಾರಂತಲ್ಲಾ! ಇಂತಹ ಸಾಹಸಗಳನ್ನು ಮಾಡಿದ ಮೇಲೆ ಪ್ರಭುತ್ವದ ರಕ್ಷಣೆ ಬೇಕಿರುತ್ತದೆ. ಅದಕ್ಕಾಗಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳನ್ನು ಕರೆದು ಹಿಗ್ಗಾಮುಗ್ಗ ಹೊಗಳಿದರಂತಲ್ಲಾ! ಹಿಂದೆ ರಾಜಕಾರಣಿಗಳನ್ನು ನಿರ್ದಾಕ್ಷಿಣ್ಯವಾಗಿ ಟೀಕಿಸುತ್ತಾ, ಅವರ ಕರ್ತವ್ಯಗಳನ್ನು ಅರಿವು ಮಾಡಿಕೊಡುತ್ತಿದ್ದ ಜಗದ್ಗುರುಗಳಿಂದ ಹೊಗಳಿಸಿಕೊಂಡ ಹಾಲಿ ಮತ್ತು ಮಾಜಿಗಳು ಗಲಿಬಿಲಿಗೊಂಡು, ಮತ್ತೊಮ್ಮೆ ಪಾದಗಳಿಗೆ ಪೊಡಮರುವಷ್ಟರಲಿ, ಪೊಲೀಸ್ ಅಧಿಕಾರಿಯೊಬ್ಬರು ಅನಾಮತ್ತು ಜಗದ್ಗುರುವಿನ ಪದತಳಕ್ಕೆ ಡೈ ಹೊಡೆದು ಇಲ್ಲದ ಬಾಲವಾಡಿಸಿದರಂತಲ್ಲಾ.. ಥೂತ್ತೇರಿ.

ಇದೇ ಮಠದ ಭವ್ಯಪರಂಪರೆಯಲ್ಲಿ ಹಿಂದಿನ ಜಗದ್ಗುರುಗಳು ನಡೆಸುತ್ತಿದ್ದ ಸಮಾರಂಭಕ್ಕೆ ಸಮವಸ್ತ್ರದಲ್ಲಿ ಬಂದ ಪೊಲೀಸ್ ಅಧಿಕಾರಿ ಸ್ವಾಮೀಜಿ ಕಾಲಿಗೆ ಬೀಳಲು ಹೋದಾಗ ಸ್ವಾಮಿಗಳು ಅದನ್ನ ತಡೆದು “ನೀವು ಸಮವಸ್ತ್ರದಲ್ಲಿರುವ ಸರಕಾರಿ ಅಧಿಕಾರಿ, ಕಾನೂನು ರಕ್ಷಿಸಬೇಕಾದವರು, ಆದ್ದರಿಂದ ಒಂದು ಮಠದ ಸ್ವಾಮಿ ಕಾಲಿಗೆ ಬೀಳಬಾರದು. ಹಾಗೆ ಗೌರವ ಕೊಡುವುದಿದ್ದರೆ ಸಮವಸ್ತ್ರ ತೆಗೆದು ಖಾಸಗಿ ಕಾರಿನಲ್ಲಿ ಬಂದು ಆಶೀರ್ವಾದ ಪಡೆಯಿರಿ” ಎಂದದ್ದು ಮಠದ ಪರಂಪರೆಯಲ್ಲಿ ಐತಿಹಾಸಿಕ ಘಟನೆಯಾಗಿ ಉಳಿದಿದೆಯಲ್ಲಾ. ಆದರೇನು ಈಚೆಗೆ ಇಲ್ಲಿಗೆ ಬಂದ ಐಪಿಎಸ್ ಅಧಿಕಾರಿಯೊಬ್ಬ ಜಗದ್ಗುರುವಿನ ಕಾಲಿಗೆ ದೀರ್ಘ ದಂಡ ಹೊಡೆದುದ್ದಲ್ಲದೆ ಧರ್ಮವೇ ದೊಡ್ಡದು ಎಂದುಬಿಟ್ಟರಲ್ಲಾ. ಈ ಅಧಿಕಾರಿಯ ಮಾತನ್ನ ಅನುಮೋದಿಸುವುದಾದರೆ, ಆಯ್ತು ಕಾನೂನಿಗಿಂತ ಧರ್ಮ ದೊಡ್ಡದು ಅಂದುಕೊಂಡರೆ, ಸದ್ಯ ತಮ್ಮ ಧರ್ಮ ಹಿಡಿದುಕೊಂಡು ಭಂಡತನ ಪ್ರದರ್ಶನ ಮಾಡುತ್ತಿರುವ ಜಗದ್ಗುರುವಿನ ಎದುರು ಭಕ್ತಾದಿಗಳು ಸಿಡಿದೆದ್ದರೆ ಧರ್ಮವಿರೋಧಿ ಕಾನೂನನ್ನ ಮುಲಾಜಿಲ್ಲದೆ ಜಾರಿ ಮಾಡಲು ರೆಡಿಯಿರುವ ಈ ಪೊಲೀಸ್ ಅಧಿಕಾರಿ ಮತ್ತು ಜಗದ್ಗುರುಗಳ ಪಾದವನ್ನೆ ನೋಡುವ ಜಿಲ್ಲಾಧಿಕಾರಿಗಳ ದೆಸೆಯಿಂದ ನೆಲದ ಕಾನೂನು ನೆಲಸಮವಾಗುತ್ತಿದೆಯಂತಲ್ಲಾ, ಥೂತ್ತೆರಿ.

ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಆದರೆ ನೂರು ವರ್ಷದ ನಂತರ ಅಥವ ಐನೂರು ವರ್ಷಗಳೂ ಆಗಬಹುದೆಂದು ಘಂಟಾಘೋಷವಾಗಿ ಹೇಳುತ್ತ ಅದನ್ನ ಸಮರ್ಥಿಸುತ್ತಿರುವ ಬಿಜೆಪಿಯ ಮೇಧಾವಿ ಮಂತ್ರಿಗಳಾದ ಈಶ್ವರಪ್ಪನ ಕೇಸರಿ ಮಾತುಗಳ ಬಗ್ಗೆ ಪತ್ರಕರ್ತರು ಜೆಡಿಎಸ್ ನಾಯಕ ಕುಮಾರಣ್ಣನಿಗೆ ಕೇಳಲಾಗಿ, ಕುಮಾರಣ್ಣ ಥೇಟ್ ಈಶ್ವರಪ್ಪನಂತೆಯೇ ಮಾತನಾಡಿದರಲ್ಲಾ.

“ಕೇಸರಿ ಅನತಕ್ಕಂತದ್ದೇನಿದೆ, ಅದು ಒಂದು ಬಟ್ಟೆ ಅಂತ ನಾವು ಪರಿಗಣಿಸಿ ಮಾತನಾಡತಕ್ಕಂತದ್ದೇನಿದೆ, ಆ ಒಂದು ವಿಷಯ ಇವತ್ತು ಪಡಕಂತಿರತಕ್ಕಂತ ಪ್ರಚಾರಯೇನಿದೆ, ಅದನ್ನ ನಾವು ಪರಿಶೀಲನೆ ಮಾಡಿದ್ರೆ ಈ ಕೇಸರಿ ಸಾಮಾನ್ಯದಾದಂತಹ ಜನ ಧರಸತಕ್ಕಂತ ಬಟ್ಟೆ ಅಲ್ಲ. ಅದೊಂದು ಶ್ರೇಷ್ಠವಾದ ಬಟ್ಟೆ ಅನತಕ್ಕಂತ ವಿಷಯವನ್ನ ನಮ್ಮ ಪರಂಪರೆಲಿ ನಮ್ಮ ಹಿರಿಯರು ತೋರಿಸಿಕೊಟ್ಟಿರತಕ್ಕಂತ ವಿಷಯ ಏನಿದೆ ಆ ಬಗ್ಗೆ ನಾವು ಹಗುರವಾಗಿ ಮಾತನಾಡಕ್ಕಂತದ್ದು ಸರಿಕಾಣದಿಲ್ಲ, ಅನತಕ್ಕಂತದ್ದು ನನ್ನ ಅಭಿಪ್ರಾಯ” ಎಂದರಂತಲ್ಲಾ. ಈ ಮಾತನ್ನ ಕೇಳಿಸಿಕೊಂಡ ಶಿವಮೊಗ್ಗದ ಕಡೆ ಜೆಡಿಎಸ್‌ನವರು ಕುಮಾರಣ್ಣ ಈಶ್ವರಪ್ಪನಂತೆ ಮಾತನಾಡುವುದಾದರೆ ನಾವ್ಯಾಕೆ ಜೆಡಿಎಸ್‌ನಲ್ಲಿರಬೇಕು ಎಂದು ಅನ್ಯ ಪಾರ್ಟಿಯ ಕಡೆ ಗುಳೆ ಹೊರಟಿದ್ದಾರಂತಲ್ಲಾ..

ಥೂತ್ತೇರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...