Homeಅಂಕಣಗಳುಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

- Advertisement -
- Advertisement -

ಕಾನೂನುಗಳಿಗಿಂತ ನನ್ನ ಧರ್ಮವೇ ದೊಡ್ಡದು, ಆದ್ದರಿಂದ ನಾನು ಕಾನೂನುಗಳಿಗೆ ಹೆದರುವುದಿಲ್ಲ ಎಂಬಂತಹ ಮಾತೊಂದು ಪತ್ರಿಕೆಗಳಲ್ಲಿ ಹರಿದಾಡಿದಾಗ ಗ್ಯಾರಂಟಿ ಈ ಮಾತನ್ನು ತಾಲೀಬಾನಿಗಳು ಆಡಿರಬಹುದು ಅಥವ ಯಾವುದಾದರೂ ಮೂಲಭೂತಾವಾದಿ ಸಂಘಟನೆಯ ಲೀಡರು ಆಡಿರಬಹುದೆಂದು ಅಷ್ಟೇನು ಗಾಬರಿಯಿಲ್ಲದೆ ಹುಡುಕಿದಾಗ ಈ ಮಾತನ್ನಾಡಿದವರು ನಮ್ಮ ಶರಣ ಪರಂಪರೆಯ ಪ್ರಖರ ವಿಚಾರವಾದಿ ಸ್ವಾಮಿಜಿಯೊಬ್ಬರು ಎಂಬುದು ಗೊತ್ತಾದಾಗ ಏರಿ ನೀರುಂಬೊಡೆ, ಬೇಲಿ ಹೊಲ ಮೇಯ್ದೊಡೆ, ನಾರಿ ತನ್ನ ಮನೆಯಲ್ಲಿ ಕದ್ದೊಡೆ ಬದುಕುವುದೇನಯ್ಯ ಎಂಬಂತಾಯ್ತಲ್ಲಾ.

ಮಧ್ಯ ಕರ್ನಾಟಕದ ಒಂದೆರಡು ಜಿಲ್ಲಾ ಪ್ರದೇಶದಲ್ಲಿ ಗೊತ್ತಿರುವ ಜಗದ್ಗುರುವೊಬ್ಬರು ಹೀಗೆ ಮಾತಾಡುತ್ತಿರಬೇಕಾದರೆ, ಅವರು ಕಾನೂನು ಮೀರಿ ಬಹಳ ವರ್ಷಗಳೇ ಆಗಿರಬೇಕು. ಮಠದ ಸಂವಿಧಾನದ ಪ್ರಕಾರ ಅರವತ್ತು ವರ್ಷಕ್ಕೆ ನಿವೃತ್ತಿ ಪಡೆದು, ಮರಿ ಸ್ವಾಮಿಗೆ ಪಟ್ಟಕಟ್ಟಿ ತಾವು ಪಕ್ಕದಲ್ಲಿ ನಿಲ್ಲಬೇಕಿತ್ತು. ಆದರೆ ಮಠದ ಪರಂಪರೆ ಬದಿಗೊತ್ತಿ, ಅರವತ್ತು ವರ್ಷವನ್ನ ಹಿಂದಿಕ್ಕಿ ಮುಂದುವರಿದ ಜಗದ್ಗುರುವಿನ ನಡೆಗೆ ಬೇಸತ್ತ ಭಕ್ತಾದಿಗಳು ಕಾನೂನು ಮೊರೆಹೋಗಿದ್ದಾರಂತಲ್ಲಾ! ಅದಕ್ಕೆ ಹೆದರಿದ ಜಗದ್ಗುರು ನಾನು ಕಾನೂನಿಗೆ ಹೆದರುವುದಿಲ್ಲ ಎಂದರಂತಲ್ಲಾ ಥೂತ್ತೇರಿ.

ಈ ನೆಲದ ಕಾನೂನಿಗಾಗಲಿ ಮಠದ ಕಾನೂನಿಗಾಗಲಿ ಹೆದರುವುದಿಲ್ಲ ಎಂದಮೇಲೆ ಭಂಡತನ ಆವರಿಸುತ್ತೆ. ಆನಂತರ ಮಾಡುವ ಎಲ್ಲ ಕೆಲಸಗಳು ಭಂಡತನದಿಂದಲೇ ಕೂಡಿರುತ್ತವೆ. ಬಹು ಹಿಂದೆ ಜಗದ್ಗುರುಗಳೇ ಬಿಗಿದ ಭಾಷಣವಿದು. ಆ ಮಾತಿನ ಪ್ರಯೋಗಕ್ಕಿಳಿದಂತಿರುವ ಜಗದ್ಗುರುಗಳು ಮಠದ ಆಸ್ತಿಯನ್ನೇ ಸ್ವಂತದ ಆಸ್ತಿಯನ್ನಾಗಿ ಮಾಡಿಕೊಳ್ಳುತ್ತ ಅದನ್ನ ದಕ್ಕಿಸಿಕೊಳ್ಳಲು ಟ್ರಸ್ಟು ಮಾಡಿಕೊಂಡು, ಪ್ರತಿಭಟಿಸುವಂತಹ ಭಕ್ತಾದಿಗಳನ್ನು ಬೆದರಿಸಲು ಶಿವಸೈನ್ಯವನ್ನೇ ಕಟ್ಟಿದ್ದಾರಂತಲ್ಲಾ! ಇಂತಹ ಸಾಹಸಗಳನ್ನು ಮಾಡಿದ ಮೇಲೆ ಪ್ರಭುತ್ವದ ರಕ್ಷಣೆ ಬೇಕಿರುತ್ತದೆ. ಅದಕ್ಕಾಗಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳನ್ನು ಕರೆದು ಹಿಗ್ಗಾಮುಗ್ಗ ಹೊಗಳಿದರಂತಲ್ಲಾ! ಹಿಂದೆ ರಾಜಕಾರಣಿಗಳನ್ನು ನಿರ್ದಾಕ್ಷಿಣ್ಯವಾಗಿ ಟೀಕಿಸುತ್ತಾ, ಅವರ ಕರ್ತವ್ಯಗಳನ್ನು ಅರಿವು ಮಾಡಿಕೊಡುತ್ತಿದ್ದ ಜಗದ್ಗುರುಗಳಿಂದ ಹೊಗಳಿಸಿಕೊಂಡ ಹಾಲಿ ಮತ್ತು ಮಾಜಿಗಳು ಗಲಿಬಿಲಿಗೊಂಡು, ಮತ್ತೊಮ್ಮೆ ಪಾದಗಳಿಗೆ ಪೊಡಮರುವಷ್ಟರಲಿ, ಪೊಲೀಸ್ ಅಧಿಕಾರಿಯೊಬ್ಬರು ಅನಾಮತ್ತು ಜಗದ್ಗುರುವಿನ ಪದತಳಕ್ಕೆ ಡೈ ಹೊಡೆದು ಇಲ್ಲದ ಬಾಲವಾಡಿಸಿದರಂತಲ್ಲಾ.. ಥೂತ್ತೇರಿ.

ಇದೇ ಮಠದ ಭವ್ಯಪರಂಪರೆಯಲ್ಲಿ ಹಿಂದಿನ ಜಗದ್ಗುರುಗಳು ನಡೆಸುತ್ತಿದ್ದ ಸಮಾರಂಭಕ್ಕೆ ಸಮವಸ್ತ್ರದಲ್ಲಿ ಬಂದ ಪೊಲೀಸ್ ಅಧಿಕಾರಿ ಸ್ವಾಮೀಜಿ ಕಾಲಿಗೆ ಬೀಳಲು ಹೋದಾಗ ಸ್ವಾಮಿಗಳು ಅದನ್ನ ತಡೆದು “ನೀವು ಸಮವಸ್ತ್ರದಲ್ಲಿರುವ ಸರಕಾರಿ ಅಧಿಕಾರಿ, ಕಾನೂನು ರಕ್ಷಿಸಬೇಕಾದವರು, ಆದ್ದರಿಂದ ಒಂದು ಮಠದ ಸ್ವಾಮಿ ಕಾಲಿಗೆ ಬೀಳಬಾರದು. ಹಾಗೆ ಗೌರವ ಕೊಡುವುದಿದ್ದರೆ ಸಮವಸ್ತ್ರ ತೆಗೆದು ಖಾಸಗಿ ಕಾರಿನಲ್ಲಿ ಬಂದು ಆಶೀರ್ವಾದ ಪಡೆಯಿರಿ” ಎಂದದ್ದು ಮಠದ ಪರಂಪರೆಯಲ್ಲಿ ಐತಿಹಾಸಿಕ ಘಟನೆಯಾಗಿ ಉಳಿದಿದೆಯಲ್ಲಾ. ಆದರೇನು ಈಚೆಗೆ ಇಲ್ಲಿಗೆ ಬಂದ ಐಪಿಎಸ್ ಅಧಿಕಾರಿಯೊಬ್ಬ ಜಗದ್ಗುರುವಿನ ಕಾಲಿಗೆ ದೀರ್ಘ ದಂಡ ಹೊಡೆದುದ್ದಲ್ಲದೆ ಧರ್ಮವೇ ದೊಡ್ಡದು ಎಂದುಬಿಟ್ಟರಲ್ಲಾ. ಈ ಅಧಿಕಾರಿಯ ಮಾತನ್ನ ಅನುಮೋದಿಸುವುದಾದರೆ, ಆಯ್ತು ಕಾನೂನಿಗಿಂತ ಧರ್ಮ ದೊಡ್ಡದು ಅಂದುಕೊಂಡರೆ, ಸದ್ಯ ತಮ್ಮ ಧರ್ಮ ಹಿಡಿದುಕೊಂಡು ಭಂಡತನ ಪ್ರದರ್ಶನ ಮಾಡುತ್ತಿರುವ ಜಗದ್ಗುರುವಿನ ಎದುರು ಭಕ್ತಾದಿಗಳು ಸಿಡಿದೆದ್ದರೆ ಧರ್ಮವಿರೋಧಿ ಕಾನೂನನ್ನ ಮುಲಾಜಿಲ್ಲದೆ ಜಾರಿ ಮಾಡಲು ರೆಡಿಯಿರುವ ಈ ಪೊಲೀಸ್ ಅಧಿಕಾರಿ ಮತ್ತು ಜಗದ್ಗುರುಗಳ ಪಾದವನ್ನೆ ನೋಡುವ ಜಿಲ್ಲಾಧಿಕಾರಿಗಳ ದೆಸೆಯಿಂದ ನೆಲದ ಕಾನೂನು ನೆಲಸಮವಾಗುತ್ತಿದೆಯಂತಲ್ಲಾ, ಥೂತ್ತೆರಿ.

ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಆದರೆ ನೂರು ವರ್ಷದ ನಂತರ ಅಥವ ಐನೂರು ವರ್ಷಗಳೂ ಆಗಬಹುದೆಂದು ಘಂಟಾಘೋಷವಾಗಿ ಹೇಳುತ್ತ ಅದನ್ನ ಸಮರ್ಥಿಸುತ್ತಿರುವ ಬಿಜೆಪಿಯ ಮೇಧಾವಿ ಮಂತ್ರಿಗಳಾದ ಈಶ್ವರಪ್ಪನ ಕೇಸರಿ ಮಾತುಗಳ ಬಗ್ಗೆ ಪತ್ರಕರ್ತರು ಜೆಡಿಎಸ್ ನಾಯಕ ಕುಮಾರಣ್ಣನಿಗೆ ಕೇಳಲಾಗಿ, ಕುಮಾರಣ್ಣ ಥೇಟ್ ಈಶ್ವರಪ್ಪನಂತೆಯೇ ಮಾತನಾಡಿದರಲ್ಲಾ.

“ಕೇಸರಿ ಅನತಕ್ಕಂತದ್ದೇನಿದೆ, ಅದು ಒಂದು ಬಟ್ಟೆ ಅಂತ ನಾವು ಪರಿಗಣಿಸಿ ಮಾತನಾಡತಕ್ಕಂತದ್ದೇನಿದೆ, ಆ ಒಂದು ವಿಷಯ ಇವತ್ತು ಪಡಕಂತಿರತಕ್ಕಂತ ಪ್ರಚಾರಯೇನಿದೆ, ಅದನ್ನ ನಾವು ಪರಿಶೀಲನೆ ಮಾಡಿದ್ರೆ ಈ ಕೇಸರಿ ಸಾಮಾನ್ಯದಾದಂತಹ ಜನ ಧರಸತಕ್ಕಂತ ಬಟ್ಟೆ ಅಲ್ಲ. ಅದೊಂದು ಶ್ರೇಷ್ಠವಾದ ಬಟ್ಟೆ ಅನತಕ್ಕಂತ ವಿಷಯವನ್ನ ನಮ್ಮ ಪರಂಪರೆಲಿ ನಮ್ಮ ಹಿರಿಯರು ತೋರಿಸಿಕೊಟ್ಟಿರತಕ್ಕಂತ ವಿಷಯ ಏನಿದೆ ಆ ಬಗ್ಗೆ ನಾವು ಹಗುರವಾಗಿ ಮಾತನಾಡಕ್ಕಂತದ್ದು ಸರಿಕಾಣದಿಲ್ಲ, ಅನತಕ್ಕಂತದ್ದು ನನ್ನ ಅಭಿಪ್ರಾಯ” ಎಂದರಂತಲ್ಲಾ. ಈ ಮಾತನ್ನ ಕೇಳಿಸಿಕೊಂಡ ಶಿವಮೊಗ್ಗದ ಕಡೆ ಜೆಡಿಎಸ್‌ನವರು ಕುಮಾರಣ್ಣ ಈಶ್ವರಪ್ಪನಂತೆ ಮಾತನಾಡುವುದಾದರೆ ನಾವ್ಯಾಕೆ ಜೆಡಿಎಸ್‌ನಲ್ಲಿರಬೇಕು ಎಂದು ಅನ್ಯ ಪಾರ್ಟಿಯ ಕಡೆ ಗುಳೆ ಹೊರಟಿದ್ದಾರಂತಲ್ಲಾ..

ಥೂತ್ತೇರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...