Homeಅಂಕಣಗಳುಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

- Advertisement -
- Advertisement -

ಕಾನೂನುಗಳಿಗಿಂತ ನನ್ನ ಧರ್ಮವೇ ದೊಡ್ಡದು, ಆದ್ದರಿಂದ ನಾನು ಕಾನೂನುಗಳಿಗೆ ಹೆದರುವುದಿಲ್ಲ ಎಂಬಂತಹ ಮಾತೊಂದು ಪತ್ರಿಕೆಗಳಲ್ಲಿ ಹರಿದಾಡಿದಾಗ ಗ್ಯಾರಂಟಿ ಈ ಮಾತನ್ನು ತಾಲೀಬಾನಿಗಳು ಆಡಿರಬಹುದು ಅಥವ ಯಾವುದಾದರೂ ಮೂಲಭೂತಾವಾದಿ ಸಂಘಟನೆಯ ಲೀಡರು ಆಡಿರಬಹುದೆಂದು ಅಷ್ಟೇನು ಗಾಬರಿಯಿಲ್ಲದೆ ಹುಡುಕಿದಾಗ ಈ ಮಾತನ್ನಾಡಿದವರು ನಮ್ಮ ಶರಣ ಪರಂಪರೆಯ ಪ್ರಖರ ವಿಚಾರವಾದಿ ಸ್ವಾಮಿಜಿಯೊಬ್ಬರು ಎಂಬುದು ಗೊತ್ತಾದಾಗ ಏರಿ ನೀರುಂಬೊಡೆ, ಬೇಲಿ ಹೊಲ ಮೇಯ್ದೊಡೆ, ನಾರಿ ತನ್ನ ಮನೆಯಲ್ಲಿ ಕದ್ದೊಡೆ ಬದುಕುವುದೇನಯ್ಯ ಎಂಬಂತಾಯ್ತಲ್ಲಾ.

ಮಧ್ಯ ಕರ್ನಾಟಕದ ಒಂದೆರಡು ಜಿಲ್ಲಾ ಪ್ರದೇಶದಲ್ಲಿ ಗೊತ್ತಿರುವ ಜಗದ್ಗುರುವೊಬ್ಬರು ಹೀಗೆ ಮಾತಾಡುತ್ತಿರಬೇಕಾದರೆ, ಅವರು ಕಾನೂನು ಮೀರಿ ಬಹಳ ವರ್ಷಗಳೇ ಆಗಿರಬೇಕು. ಮಠದ ಸಂವಿಧಾನದ ಪ್ರಕಾರ ಅರವತ್ತು ವರ್ಷಕ್ಕೆ ನಿವೃತ್ತಿ ಪಡೆದು, ಮರಿ ಸ್ವಾಮಿಗೆ ಪಟ್ಟಕಟ್ಟಿ ತಾವು ಪಕ್ಕದಲ್ಲಿ ನಿಲ್ಲಬೇಕಿತ್ತು. ಆದರೆ ಮಠದ ಪರಂಪರೆ ಬದಿಗೊತ್ತಿ, ಅರವತ್ತು ವರ್ಷವನ್ನ ಹಿಂದಿಕ್ಕಿ ಮುಂದುವರಿದ ಜಗದ್ಗುರುವಿನ ನಡೆಗೆ ಬೇಸತ್ತ ಭಕ್ತಾದಿಗಳು ಕಾನೂನು ಮೊರೆಹೋಗಿದ್ದಾರಂತಲ್ಲಾ! ಅದಕ್ಕೆ ಹೆದರಿದ ಜಗದ್ಗುರು ನಾನು ಕಾನೂನಿಗೆ ಹೆದರುವುದಿಲ್ಲ ಎಂದರಂತಲ್ಲಾ ಥೂತ್ತೇರಿ.

ಈ ನೆಲದ ಕಾನೂನಿಗಾಗಲಿ ಮಠದ ಕಾನೂನಿಗಾಗಲಿ ಹೆದರುವುದಿಲ್ಲ ಎಂದಮೇಲೆ ಭಂಡತನ ಆವರಿಸುತ್ತೆ. ಆನಂತರ ಮಾಡುವ ಎಲ್ಲ ಕೆಲಸಗಳು ಭಂಡತನದಿಂದಲೇ ಕೂಡಿರುತ್ತವೆ. ಬಹು ಹಿಂದೆ ಜಗದ್ಗುರುಗಳೇ ಬಿಗಿದ ಭಾಷಣವಿದು. ಆ ಮಾತಿನ ಪ್ರಯೋಗಕ್ಕಿಳಿದಂತಿರುವ ಜಗದ್ಗುರುಗಳು ಮಠದ ಆಸ್ತಿಯನ್ನೇ ಸ್ವಂತದ ಆಸ್ತಿಯನ್ನಾಗಿ ಮಾಡಿಕೊಳ್ಳುತ್ತ ಅದನ್ನ ದಕ್ಕಿಸಿಕೊಳ್ಳಲು ಟ್ರಸ್ಟು ಮಾಡಿಕೊಂಡು, ಪ್ರತಿಭಟಿಸುವಂತಹ ಭಕ್ತಾದಿಗಳನ್ನು ಬೆದರಿಸಲು ಶಿವಸೈನ್ಯವನ್ನೇ ಕಟ್ಟಿದ್ದಾರಂತಲ್ಲಾ! ಇಂತಹ ಸಾಹಸಗಳನ್ನು ಮಾಡಿದ ಮೇಲೆ ಪ್ರಭುತ್ವದ ರಕ್ಷಣೆ ಬೇಕಿರುತ್ತದೆ. ಅದಕ್ಕಾಗಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳನ್ನು ಕರೆದು ಹಿಗ್ಗಾಮುಗ್ಗ ಹೊಗಳಿದರಂತಲ್ಲಾ! ಹಿಂದೆ ರಾಜಕಾರಣಿಗಳನ್ನು ನಿರ್ದಾಕ್ಷಿಣ್ಯವಾಗಿ ಟೀಕಿಸುತ್ತಾ, ಅವರ ಕರ್ತವ್ಯಗಳನ್ನು ಅರಿವು ಮಾಡಿಕೊಡುತ್ತಿದ್ದ ಜಗದ್ಗುರುಗಳಿಂದ ಹೊಗಳಿಸಿಕೊಂಡ ಹಾಲಿ ಮತ್ತು ಮಾಜಿಗಳು ಗಲಿಬಿಲಿಗೊಂಡು, ಮತ್ತೊಮ್ಮೆ ಪಾದಗಳಿಗೆ ಪೊಡಮರುವಷ್ಟರಲಿ, ಪೊಲೀಸ್ ಅಧಿಕಾರಿಯೊಬ್ಬರು ಅನಾಮತ್ತು ಜಗದ್ಗುರುವಿನ ಪದತಳಕ್ಕೆ ಡೈ ಹೊಡೆದು ಇಲ್ಲದ ಬಾಲವಾಡಿಸಿದರಂತಲ್ಲಾ.. ಥೂತ್ತೇರಿ.

ಇದೇ ಮಠದ ಭವ್ಯಪರಂಪರೆಯಲ್ಲಿ ಹಿಂದಿನ ಜಗದ್ಗುರುಗಳು ನಡೆಸುತ್ತಿದ್ದ ಸಮಾರಂಭಕ್ಕೆ ಸಮವಸ್ತ್ರದಲ್ಲಿ ಬಂದ ಪೊಲೀಸ್ ಅಧಿಕಾರಿ ಸ್ವಾಮೀಜಿ ಕಾಲಿಗೆ ಬೀಳಲು ಹೋದಾಗ ಸ್ವಾಮಿಗಳು ಅದನ್ನ ತಡೆದು “ನೀವು ಸಮವಸ್ತ್ರದಲ್ಲಿರುವ ಸರಕಾರಿ ಅಧಿಕಾರಿ, ಕಾನೂನು ರಕ್ಷಿಸಬೇಕಾದವರು, ಆದ್ದರಿಂದ ಒಂದು ಮಠದ ಸ್ವಾಮಿ ಕಾಲಿಗೆ ಬೀಳಬಾರದು. ಹಾಗೆ ಗೌರವ ಕೊಡುವುದಿದ್ದರೆ ಸಮವಸ್ತ್ರ ತೆಗೆದು ಖಾಸಗಿ ಕಾರಿನಲ್ಲಿ ಬಂದು ಆಶೀರ್ವಾದ ಪಡೆಯಿರಿ” ಎಂದದ್ದು ಮಠದ ಪರಂಪರೆಯಲ್ಲಿ ಐತಿಹಾಸಿಕ ಘಟನೆಯಾಗಿ ಉಳಿದಿದೆಯಲ್ಲಾ. ಆದರೇನು ಈಚೆಗೆ ಇಲ್ಲಿಗೆ ಬಂದ ಐಪಿಎಸ್ ಅಧಿಕಾರಿಯೊಬ್ಬ ಜಗದ್ಗುರುವಿನ ಕಾಲಿಗೆ ದೀರ್ಘ ದಂಡ ಹೊಡೆದುದ್ದಲ್ಲದೆ ಧರ್ಮವೇ ದೊಡ್ಡದು ಎಂದುಬಿಟ್ಟರಲ್ಲಾ. ಈ ಅಧಿಕಾರಿಯ ಮಾತನ್ನ ಅನುಮೋದಿಸುವುದಾದರೆ, ಆಯ್ತು ಕಾನೂನಿಗಿಂತ ಧರ್ಮ ದೊಡ್ಡದು ಅಂದುಕೊಂಡರೆ, ಸದ್ಯ ತಮ್ಮ ಧರ್ಮ ಹಿಡಿದುಕೊಂಡು ಭಂಡತನ ಪ್ರದರ್ಶನ ಮಾಡುತ್ತಿರುವ ಜಗದ್ಗುರುವಿನ ಎದುರು ಭಕ್ತಾದಿಗಳು ಸಿಡಿದೆದ್ದರೆ ಧರ್ಮವಿರೋಧಿ ಕಾನೂನನ್ನ ಮುಲಾಜಿಲ್ಲದೆ ಜಾರಿ ಮಾಡಲು ರೆಡಿಯಿರುವ ಈ ಪೊಲೀಸ್ ಅಧಿಕಾರಿ ಮತ್ತು ಜಗದ್ಗುರುಗಳ ಪಾದವನ್ನೆ ನೋಡುವ ಜಿಲ್ಲಾಧಿಕಾರಿಗಳ ದೆಸೆಯಿಂದ ನೆಲದ ಕಾನೂನು ನೆಲಸಮವಾಗುತ್ತಿದೆಯಂತಲ್ಲಾ, ಥೂತ್ತೆರಿ.

ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಆದರೆ ನೂರು ವರ್ಷದ ನಂತರ ಅಥವ ಐನೂರು ವರ್ಷಗಳೂ ಆಗಬಹುದೆಂದು ಘಂಟಾಘೋಷವಾಗಿ ಹೇಳುತ್ತ ಅದನ್ನ ಸಮರ್ಥಿಸುತ್ತಿರುವ ಬಿಜೆಪಿಯ ಮೇಧಾವಿ ಮಂತ್ರಿಗಳಾದ ಈಶ್ವರಪ್ಪನ ಕೇಸರಿ ಮಾತುಗಳ ಬಗ್ಗೆ ಪತ್ರಕರ್ತರು ಜೆಡಿಎಸ್ ನಾಯಕ ಕುಮಾರಣ್ಣನಿಗೆ ಕೇಳಲಾಗಿ, ಕುಮಾರಣ್ಣ ಥೇಟ್ ಈಶ್ವರಪ್ಪನಂತೆಯೇ ಮಾತನಾಡಿದರಲ್ಲಾ.

“ಕೇಸರಿ ಅನತಕ್ಕಂತದ್ದೇನಿದೆ, ಅದು ಒಂದು ಬಟ್ಟೆ ಅಂತ ನಾವು ಪರಿಗಣಿಸಿ ಮಾತನಾಡತಕ್ಕಂತದ್ದೇನಿದೆ, ಆ ಒಂದು ವಿಷಯ ಇವತ್ತು ಪಡಕಂತಿರತಕ್ಕಂತ ಪ್ರಚಾರಯೇನಿದೆ, ಅದನ್ನ ನಾವು ಪರಿಶೀಲನೆ ಮಾಡಿದ್ರೆ ಈ ಕೇಸರಿ ಸಾಮಾನ್ಯದಾದಂತಹ ಜನ ಧರಸತಕ್ಕಂತ ಬಟ್ಟೆ ಅಲ್ಲ. ಅದೊಂದು ಶ್ರೇಷ್ಠವಾದ ಬಟ್ಟೆ ಅನತಕ್ಕಂತ ವಿಷಯವನ್ನ ನಮ್ಮ ಪರಂಪರೆಲಿ ನಮ್ಮ ಹಿರಿಯರು ತೋರಿಸಿಕೊಟ್ಟಿರತಕ್ಕಂತ ವಿಷಯ ಏನಿದೆ ಆ ಬಗ್ಗೆ ನಾವು ಹಗುರವಾಗಿ ಮಾತನಾಡಕ್ಕಂತದ್ದು ಸರಿಕಾಣದಿಲ್ಲ, ಅನತಕ್ಕಂತದ್ದು ನನ್ನ ಅಭಿಪ್ರಾಯ” ಎಂದರಂತಲ್ಲಾ. ಈ ಮಾತನ್ನ ಕೇಳಿಸಿಕೊಂಡ ಶಿವಮೊಗ್ಗದ ಕಡೆ ಜೆಡಿಎಸ್‌ನವರು ಕುಮಾರಣ್ಣ ಈಶ್ವರಪ್ಪನಂತೆ ಮಾತನಾಡುವುದಾದರೆ ನಾವ್ಯಾಕೆ ಜೆಡಿಎಸ್‌ನಲ್ಲಿರಬೇಕು ಎಂದು ಅನ್ಯ ಪಾರ್ಟಿಯ ಕಡೆ ಗುಳೆ ಹೊರಟಿದ್ದಾರಂತಲ್ಲಾ..

ಥೂತ್ತೇರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...