ಪೆಟ್ರೋಲ್-ಡೀಸೆಲ್ ಬೆಲೆಯನ್ನು 17/18 ಪೈಸೆ ಇಳಿಕೆ ಕಂಡಿರುವುದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಬೆಲೆಯನ್ನು 17/18 ಪೈಸೆ ಇಳಿಸಿದೆ. ಇಷ್ಟು ಪ್ರಮಾಣದ ಹಣ ಉಳಿಸಿ ನೀವು ಏನು ಮಾಡುತ್ತೀರಿ?” ಎಂದು ವ್ಯಂಗ್ಯವಾಡಿದ್ದಾರೆ.
चुनाव के कारण केंद्र सरकार ने पेट्रोल-डीज़ल 17/18 पैसे प्रति लीटर सस्ता किया है।
बचत की इस धनराशि से आप क्या-क्या करेंगे? #FuelLootByBJP
— Rahul Gandhi (@RahulGandhi) March 28, 2021
ದೇಶದಲ್ಲಿ ತೈಲ ಬೆಲೆ ಒಂದೇ ಸಮನೆ ಏರುತ್ತಾ ಬಂದು ನೂರರ ಗಡಿಯಲ್ಲಿ ನಿಂತಿದೆ. ಇದರ ವಿರುದ್ಧ ದೇಶದಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ಕೂಡ ಕಟುವಾಗಿ ಟೀಕಿಸಿದ್ದರು.
ಇದನ್ನೂ ಓದಿ: ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ
ಈ ವಾರದ ಆರಂಭದಲ್ಲಿ, ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳನ್ನು ದೂಷಿಸುತ್ತಾ, ಇದು ನಿರುದ್ಯೋಗ ಮತ್ತು ಬಡತನವನ್ನು ಹೆಚ್ಚಿಸಿದೆ ಎಂದು ಆರೋಪಿಸಿದ್ದರು.
ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ 5 ರಾಜ್ಯಗಳಲ್ಲಿ ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿವೆ.
ಈ ರಾಜ್ಯಗಳಲ್ಲಿ ಮತದಾನವು ಮಾರ್ಚ್ 27 ರಂದು ಪ್ರಾರಂಭವಾಗಿ ಏಪ್ರಿಲ್ 29 ಕ್ಕೆ ಕೊನೆಗೊಳ್ಳುತ್ತದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯ ಮತ ಎಣಿಕೆ ಮೇ 2 ರಂದು ನಡೆಯಲಿದೆ.
ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯ 2.7 ಲಕ್ಷ ಮತಗಟ್ಟೆಗಳಲ್ಲಿ 18.68 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತವು ಶನಿವಾರ ಮುಕ್ತಾಯಗೊಂಡಿದೆ.
ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ