Homeಅಂತರಾಷ್ಟ್ರೀಯತೈಲ ಸೋರಿಕೆ ಬಿಕ್ಕಟ್ಟು ಉಲ್ಬಣ; 'ಪರಿಸರ ತುರ್ತು ಪರಿಸ್ಥಿತಿ' ಘೋಷಿಸಿದ ಮಾರಿಷಸ್

ತೈಲ ಸೋರಿಕೆ ಬಿಕ್ಕಟ್ಟು ಉಲ್ಬಣ; ‘ಪರಿಸರ ತುರ್ತು ಪರಿಸ್ಥಿತಿ’ ಘೋಷಿಸಿದ ಮಾರಿಷಸ್

3,800 ಟನ್ ಇಂಧನವನ್ನು ಸಾಗಿಸುತ್ತಿದ್ದ ಇದು, ಬ್ಲೂ ಬೇ ಮೆರೈನ್ ಪಾರ್ಕ್‌ನ ವೈಡೂರ್ಯದ ಸಮೀಪವಿರುವ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪಟ್ಟಿ ಮಾಡಲಾದ ಸಂರಕ್ಷಣಾ ತಾಣವಾದ ಪಾಯಿಂಟ್ d'Esny ಯಲ್ಲಿ ಬಂಡೆಗೆ ಡಿಕ್ಕಿ ಹೊಡೆದಿದೆ. 

- Advertisement -
- Advertisement -

ಮಾರಿಷಸ್‌ನ ಪ್ರಧಾನ ಮಂತ್ರಿ ಪರಿಸರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ತುರ್ತು ನೆರವು ನೀಡುವಂತೆ ಫ್ರಾನ್ಸ್‌ಗೆ ಮನವಿ ಮಾಡಿದ್ದಾರೆ.

“ಪರಿಸರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ” ಎಂದು ಪ್ರಧಾನಿ ಪ್ರವೀಂದ್ ಜುಗ್ನಾಥ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶುಕ್ರವಾರ  ಪೋಸ್ಟ್ ಮಾಡಿದ್ದಾರೆ.

ಎರಡು ವಾರಗಳ ಹಿಂದೆ ಘಟಿಸಿದ ಅವಘಡ ಬೃಹತ್ ವಾಹಕ ಎಂ.ವಿ.ವಾಕಾಶಿಯೊದಿಂದ ಇಂಧನ ಸೋರಿಕೆಯನ್ನು ತಡೆಯುವ ಪ್ರಯತ್ನಗಳಿಗೆ ಫಲ ಸಿಕ್ಕಿಲ್ಲ. ಇದು ಸಮುದ್ರ ಪ್ರದೇಶದ ನೀರನ್ನು ಕಲುಷಿತಗೊಳಿಸುತ್ತಿದೆ.

ಜಪಾನಿನ ಕಂಪನಿಯೊಂದಕ್ಕೆ ಸೇರಿದ ಆದರೆ ಪನಾಮಿಯನ್-ಆರಂಭಿಸಿದ ಟ್ಯಾಂಕರ್ 3,800 ಟನ್ ಇಂಧನವನ್ನು ಸಾಗಿಸುತ್ತಿತ್ತು. ಇದು, ಬ್ಲೂ ಬೇ ಮೆರೈನ್ ಪಾರ್ಕ್‌ನ ವೈಡೂರ್ಯದ ಸಮೀಪವಿರುವ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪಟ್ಟಿ ಮಾಡಲಾದ ಸಂರಕ್ಷಣಾ ತಾಣವಾದ ಪಾಯಿಂಟ್ d’Esny ಯಲ್ಲಿ ಬಂಡೆಗೆ ಡಿಕ್ಕಿ ಹೊಡೆದಿದೆ. ಭಾರೀ ಪ್ರಮಾಣ ಇಂಧನ ಸೋರಿಕೆಯಾಗಿದೆ ಎಂದು ಪರಿಸರ ಸಚಿವಾಲಯವು ತಿಳಿಸಿದೆ.

ಮಾರಿಷಸ್ ಹಸಿರು ಪ್ರವಾಸೋದ್ಯಮ ತಾಣವಾಗಿ ತನ್ನ ಖ್ಯಾತಿಯನ್ನು ನಿರ್ಮಿಸಿದ್ದ ಸ್ಥಳಗಳಲ್ಲಿ ಇಂಧನ ಸೋರಿಕೆಯು ಭಾರೀ ಹಾನಿ ಉಂಟುಮಾಡಿದೆ. ವೈಮಾನಿಕ ಚಿತ್ರಗಳು ಹಾನಿಯ ಪ್ರಮಾಣವನ್ನು ತೋರಿಸುತ್ತಿದ್ದು, ನೀಲಿ ಸಮುದ್ರಗಳು ತೈಲ ಸೋರಿಕೆಯಿಂದ ಕಪ್ಪು ಬಣ್ಣಕ್ಕೆ ತಿರುಗಿದೆ.

“ವಕಾಶಿಯೊ ಮುಳುಗುವಿಕೆ ಮಾರಿಷಸ್‌ಗೆ ಅಪಾಯವನ್ನು ತಂದಿಡುತ್ತದೆ. ಹಡಗುಗಳನ್ನು ಮರುಹೊಂದಿಸಲು ನಮ್ಮ ದೇಶಕ್ಕೆ ಕೌಶಲ್ಯ ಮತ್ತು ಪರಿಣತಿ ಇಲ್ಲ. ಆದ್ದರಿಂದ ನಾನು ಫ್ರಾನ್ಸ್‌ನ ಸಹಾಯವನ್ನು ಕೋರಿದ್ದೇನೆ” ಎಂದಿದ್ದಾರೆ.

ಜುಲೈ 25 ರಂದು ಹಡಗಿನಲ್ಲಿದ್ದ ಇಪ್ಪತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಮಾರಿಷಸ್‌ನ ಆರ್ಥಿಕತೆಯ ಬೆನ್ನೆಲುಬಾಗಿರುವ ರಾಷ್ಟ್ರದ ಕರಾವಳಿಯಲ್ಲಿ ಇನ್ನೂ ಹೆಚ್ಚಿನ ಸೋರಿಕೆ ಹಾನಿಯನ್ನುಂಟುಮಾಡುತ್ತದೆ ಎಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾರಿಷಸ್, ಆಹಾರಕ್ಕಾಗಿ ಮತ್ತು ಪ್ರವಾಸೋದ್ಯಮಕ್ಕಾಗಿ ತನ್ನ ಸಮುದ್ರಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...