Homeಕರ್ನಾಟಕಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್‌ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

“ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ನಾವು ಕೇಳಿದೆವು. ಆದರೆ ಯಾರದ್ದೋ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ದೀರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗುತ್ತದೆ. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಹಲವು ರಾಜ್ಯಗಳ ಸರ್ಕಾರಗಳನ್ನ ನೋಡುತ್ತಿದ್ದೇವೆ. ಕೀಳು ಮಟ್ಟದ ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು” ಎಂದು ಆಶಿಸಿದ್ದಾರೆ.

“ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ಹೇಳಿದ್ದಾರೆ.

ಮೀಸಲಾತಿಯನ್ನು ಕಿತ್ತು ಹಾಕಿರುವುದನ್ನು ಪ್ರಶ್ನಿಸಿ ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಇದನ್ನೂ ಓದಿರಿ: ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...