Homeಕರ್ನಾಟಕಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್‌ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

“ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ನಾವು ಕೇಳಿದೆವು. ಆದರೆ ಯಾರದ್ದೋ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ದೀರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗುತ್ತದೆ. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಹಲವು ರಾಜ್ಯಗಳ ಸರ್ಕಾರಗಳನ್ನ ನೋಡುತ್ತಿದ್ದೇವೆ. ಕೀಳು ಮಟ್ಟದ ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು” ಎಂದು ಆಶಿಸಿದ್ದಾರೆ.

“ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ಹೇಳಿದ್ದಾರೆ.

ಮೀಸಲಾತಿಯನ್ನು ಕಿತ್ತು ಹಾಕಿರುವುದನ್ನು ಪ್ರಶ್ನಿಸಿ ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಇದನ್ನೂ ಓದಿರಿ: ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...