Homeಕರ್ನಾಟಕಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್‌ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

“ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ನಾವು ಕೇಳಿದೆವು. ಆದರೆ ಯಾರದ್ದೋ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ದೀರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗುತ್ತದೆ. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಹಲವು ರಾಜ್ಯಗಳ ಸರ್ಕಾರಗಳನ್ನ ನೋಡುತ್ತಿದ್ದೇವೆ. ಕೀಳು ಮಟ್ಟದ ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು” ಎಂದು ಆಶಿಸಿದ್ದಾರೆ.

“ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ಹೇಳಿದ್ದಾರೆ.

ಮೀಸಲಾತಿಯನ್ನು ಕಿತ್ತು ಹಾಕಿರುವುದನ್ನು ಪ್ರಶ್ನಿಸಿ ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಇದನ್ನೂ ಓದಿರಿ: ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...