Homeಕರ್ನಾಟಕಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್‌ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

“ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ನಾವು ಕೇಳಿದೆವು. ಆದರೆ ಯಾರದ್ದೋ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ದೀರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗುತ್ತದೆ. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಹಲವು ರಾಜ್ಯಗಳ ಸರ್ಕಾರಗಳನ್ನ ನೋಡುತ್ತಿದ್ದೇವೆ. ಕೀಳು ಮಟ್ಟದ ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು” ಎಂದು ಆಶಿಸಿದ್ದಾರೆ.

“ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ಹೇಳಿದ್ದಾರೆ.

ಮೀಸಲಾತಿಯನ್ನು ಕಿತ್ತು ಹಾಕಿರುವುದನ್ನು ಪ್ರಶ್ನಿಸಿ ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಇದನ್ನೂ ಓದಿರಿ: ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...