ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
“ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ನಾವು ಕೇಳಿದೆವು. ಆದರೆ ಯಾರದ್ದೋ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
“ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ದೀರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗುತ್ತದೆ. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಹಲವು ರಾಜ್ಯಗಳ ಸರ್ಕಾರಗಳನ್ನ ನೋಡುತ್ತಿದ್ದೇವೆ. ಕೀಳು ಮಟ್ಟದ ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು” ಎಂದು ಆಶಿಸಿದ್ದಾರೆ.
“ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ಹೇಳಿದ್ದಾರೆ.
ಮೀಸಲಾತಿಯನ್ನು ಕಿತ್ತು ಹಾಕಿರುವುದನ್ನು ಪ್ರಶ್ನಿಸಿ ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.
ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.
ಇದನ್ನೂ ಓದಿರಿ: ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.
“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.
Swamiji mahashahere , gothirali nimage,yarado thinnuthilla,nimmadu nimage,at last,be happy
I feel good response from swamyji, as he not thinking about relegion, but thinking of humanity,
Great swamyji…
Nimge meesalati beda Anni swamijiyavere heli