Homeಮುಖಪುಟಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; 'ಇಸ್ಲಾಮೋಫೋಬಿಕ್' ಕುರಿತು ಆತಂಕ ವ್ಯಕ್ತಪಡಿಸಿದ...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು ಕೋಮುವಾದಿ ಮನಸ್ಥಿತಿಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಓಲಾ ಚಾಲಕನೊಬ್ಬ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಲ್ಲದೆ, ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳನ್ನು ಹೆಮ್ಮೆಯಿಂದ ವಿವರಿಸಿದ್ದಾನೆ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಡಾ. ಸೈಫ್ ಮೆಹಮೂದ್ ಹೇಳಿದ್ದಾರೆ.

ಮೆಹಮೂದ್ ಪ್ರಕಾರ, ಮಾರ್ಚ್ 15 ರಂದು ಸಂಜೆ 5:22 ಕ್ಕೆ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಿಂದ ಮಧ್ಯ ದೆಹಲಿಯ ಮ್ಯಾಕ್ಸ್ ಮುಲ್ಲರ್ ಭವನಕ್ಕೆ ಪ್ರಯಾಣಿಸಲು ಓಲಾ ಮೂಲಕ ಕ್ಯಾಬ್ ಬುಕ್ ಮಾಡಿದಾಗ ಈ ಘಟನೆ ಸಂಭವಿಸಿದೆ. ಪ್ರಯಾಣದ ಸಮಯದಲ್ಲಿ, ಚಾಲಕ ತನ್ನ ಮುಸ್ಲಿಂ ಗುರುತಿನ ಬಗ್ಗೆ ತಿಳಿದ ನಂತರ ಕೋಮುವಾದಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ, ನನ್ನನ್ನು ಬೆದರಿಸಲು ಪ್ರಯತ್ನಿಸಿದನು ಎಂದು ಆರೋಪಿಸಲಾಗಿದೆ.

ಮಾರ್ಚ್ 16 ರಂದು ಓಲಾ ಮತ್ತು ಅದರ ಸಿಇಒ ಭವಿಶ್ ಅಗರ್ವಾಲ್ ಅವರಿಗೆ ಕಳುಹಿಸಲಾದ ವಿವರವಾದ ದೂರು ಮತ್ತು ಕಾನೂನು ನೋಟಿಸ್‌ನಲ್ಲಿ, ಡಾ. ಮೆಹಮೂದ್ ಘಟನೆಯ ಬಗ್ಗೆ ಆಘಾತ ಮತ್ತು ಎಚ್ಚರಿಕೆ ವ್ಯಕ್ತಪಡಿಸಿದ್ದಾರೆ. ಓಲಾ ಪ್ರಯಾಣದಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಆ್ಯಪ್‌ನಲ್ಲಿ “ಶ್ರೀ ರಾಮ್” ಎಂಬ ಹೆಸರಿನ ಚಾಲಕ ಪ್ರತ್ಯೇಕ ಘಟನೆಗಳಲ್ಲಿ ಮುಸ್ಲಿಂ ಪ್ರಯಾಣಿಕರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಿದ್ದಾಗಿ ಹೇಳಿಕೊಮಡು ಹೆಮ್ಮೆಪಡುತ್ತಾನೆ ಎಂದು ವಕೀಲರು ಆರೋಪಿಸಿದ್ದಾರೆ. ಅಂತಹ ಒಂದು ಪ್ರಕರಣದಲ್ಲಿ ಆತ “ಅನ್ಸಾರಿ-ವನ್ಸಾರಿ” ಎಂಬ ಪ್ರಯಾಣಿಕನ ಮೇಲೆ ರಸ್ತೆಬದಿಯ ಧಾಬಾದಲ್ಲಿ ಹೊಡೆದಿದ್ದಾಗಿ ಅವರು ಹೇಳಿಕೊಂಡರು. ಇತರರು ಕೂಡ ಹಲ್ಲೆಗೆ ಸಹಕರಿಸಿದ್ದರು. ನೋಯ್ಡಾದಲ್ಲಿ ನಡೆದ ಮತ್ತೊಂದು ಘಟನೆ ಕುರಿತು ಕೂಡ ಚಾಲಕ ವಿವರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿತ ಬಲಿಪಶುಗಳ ಧಾರ್ಮಿಕ ಗುರುತನ್ನು ಚಾಲಕ ಪದೇ ಪದೇ ಒತ್ತಿ ಹೇಳಿದ್ದು, “ಅಂತಹ ಜನರಿಗೆ ಪಾಠ ಕಲಿಸಿದ್ದಕ್ಕಾಗಿ” ಉತ್ತರ ಪ್ರದೇಶ ಸರ್ಕಾರವನ್ನು ಹೊಗಳಿದ ಎಂದು ಹೇಳಿದ್ದಾರೆ.

ವಕೀಲರ ಪ್ರಕಾರ, ಚಾಲಕನ ಹೇಳಿಕೆಗಳು ಉದ್ದೇಶಪೂರ್ವಕ ಮತ್ತು ಇಸ್ಲಾಮೋಫೋಬಿಯಾದ ಮಾದರಿಯನ್ನು ಪ್ರತಿಬಿಂಬಿಸುತ್ತವೆ, ಇದು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಎಚ್ಚರಿಕೆ ಮೂಡಿಸಿದೆ ಎಂದು ವರದಿಯಾಗಿದೆ.

ದೂರಿನ ನಂತರ, ಓಲಾ ಸಂಸ್ಥೆಯು ಚಾಲಕನನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಆದರೂ, ಕಂಪನಿಯ ಪ್ರತಿಕ್ರಿಯೆ ಟೀಕೆಗೆ ಗುರಿಯಾಗಿದೆ.

ಇಮೇಲ್‌ನಲ್ಲಿ ಬರೆದಿರುವ ಓಲಾ, “ನಿಮಗೆ ಇಂತಹ ಅಹಿತಕರ ಅನುಭವ ಸಿಕ್ಕಿದ್ದಕ್ಕೆ ನಮಗೆ ವಿಷಾದವಿದೆ… ಅಸುರಕ್ಷಿತ ನಡವಳಿಕೆಗಾಗಿ ನಾವು ಪ್ರಶ್ನೆಯಲ್ಲಿರುವ ಚಾಲಕನನ್ನು ಅಮಾನತುಗೊಳಿಸಿದ್ದೇವೆ” ಎಮದು ಹೇಳಿದೆ.

ಈ ಪ್ರತಿಕ್ರಿಯೆಯನ್ನು “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಎಂದು ಮೆಹಮೂದ್ ಹೇಳಿದ್ದಾರೆ. ಇದು ಕೋಮು ಹಿಂಸಾಚಾರದ ಬಗ್ಗೆ ಕಳವಳ ಮತ್ತು ಅಂತಹ ನಡವಳಿಕೆಯನ್ನು ತಡೆಗಟ್ಟಲು ವ್ಯವಸ್ಥಿತ ಸುರಕ್ಷತಾ ಕ್ರಮಗಳನ್ನು ಒಳಗೊಂಡಂತೆ ಘಟನೆಯ ಗಂಭೀರತೆಯನ್ನು ಪರಿಹರಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಕಂಪನಿಯ ಪ್ರಯಾಣಿಕರ ಸುರಕ್ಷತಾ ನೀತಿಗಳು ಮತ್ತು ಧರ್ಮದ ಆಧಾರದ ಮೇಲೆ ಚಾಲಕರು ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವುದನ್ನು ತಡೆಯಲು ಇರುವ ಕಾರ್ಯವಿಧಾನಗಳನ್ನು ಸಹ ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ದ್ವೇಷಪೂರಿತ ನಡವಳಿಕೆಗೆ ಈ ಘಟನೆಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ಗುರಿಯಾಗಿಸುವುದು, ಹಿಂಸಾಚಾರವನ್ನು ವೈಭವೀಕರಿಸುವುದು ತೀವ್ರವಾಗಿ ಖಂಡನೀಯ ಮಾತ್ರವಲ್ಲದೆ ಕಾನೂನಿನ ನಿಯಮ ಮತ್ತು ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವ ಗಂಭೀರ ಅಪರಾಧ ವಿಷಯವಾಗಿದೆ ಎಂದಿದ್ದಾರೆ.

ಇಂತಹ ಕೃತ್ಯಗಳು ಕಟ್ಟುನಿಟ್ಟಾದ ಹೊಣೆಗಾರಿಕೆಯನ್ನು ಒಳಗೊಂಡ ವ್ಯಕ್ತಿಗಳಿಂದ ಮಾತ್ರವಲ್ಲದೆ, ತಾರತಮ್ಯ ಮತ್ತು ಬೆದರಿಕೆಯ ವಿರುದ್ಧ ಬಲವಾದ ಸುರಕ್ಷತೆಗಳನ್ನು ಖಚಿತಪಡಿಸಿಕೊಳ್ಳಬೇಕಾದ ಸೇವಾ ಪೂರೈಕೆದಾರರಿಂದಲೂ ಬಯಸುತ್ತವೆ. ಎಲ್ಲಾ ಪ್ರಯಾಣಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಗುರುತನ್ನು ಲೆಕ್ಕಿಸದೆ, ನಿರ್ಲಕ್ಷಿಸಲಾಗದ ಮೂಲಭೂತ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...