Homeಮುಖಪುಟಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; 'ಇಸ್ಲಾಮೋಫೋಬಿಕ್' ಕುರಿತು ಆತಂಕ ವ್ಯಕ್ತಪಡಿಸಿದ...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು ಕೋಮುವಾದಿ ಮನಸ್ಥಿತಿಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಓಲಾ ಚಾಲಕನೊಬ್ಬ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಲ್ಲದೆ, ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳನ್ನು ಹೆಮ್ಮೆಯಿಂದ ವಿವರಿಸಿದ್ದಾನೆ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಡಾ. ಸೈಫ್ ಮೆಹಮೂದ್ ಹೇಳಿದ್ದಾರೆ.

ಮೆಹಮೂದ್ ಪ್ರಕಾರ, ಮಾರ್ಚ್ 15 ರಂದು ಸಂಜೆ 5:22 ಕ್ಕೆ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಿಂದ ಮಧ್ಯ ದೆಹಲಿಯ ಮ್ಯಾಕ್ಸ್ ಮುಲ್ಲರ್ ಭವನಕ್ಕೆ ಪ್ರಯಾಣಿಸಲು ಓಲಾ ಮೂಲಕ ಕ್ಯಾಬ್ ಬುಕ್ ಮಾಡಿದಾಗ ಈ ಘಟನೆ ಸಂಭವಿಸಿದೆ. ಪ್ರಯಾಣದ ಸಮಯದಲ್ಲಿ, ಚಾಲಕ ತನ್ನ ಮುಸ್ಲಿಂ ಗುರುತಿನ ಬಗ್ಗೆ ತಿಳಿದ ನಂತರ ಕೋಮುವಾದಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ, ನನ್ನನ್ನು ಬೆದರಿಸಲು ಪ್ರಯತ್ನಿಸಿದನು ಎಂದು ಆರೋಪಿಸಲಾಗಿದೆ.

ಮಾರ್ಚ್ 16 ರಂದು ಓಲಾ ಮತ್ತು ಅದರ ಸಿಇಒ ಭವಿಶ್ ಅಗರ್ವಾಲ್ ಅವರಿಗೆ ಕಳುಹಿಸಲಾದ ವಿವರವಾದ ದೂರು ಮತ್ತು ಕಾನೂನು ನೋಟಿಸ್‌ನಲ್ಲಿ, ಡಾ. ಮೆಹಮೂದ್ ಘಟನೆಯ ಬಗ್ಗೆ ಆಘಾತ ಮತ್ತು ಎಚ್ಚರಿಕೆ ವ್ಯಕ್ತಪಡಿಸಿದ್ದಾರೆ. ಓಲಾ ಪ್ರಯಾಣದಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಆ್ಯಪ್‌ನಲ್ಲಿ “ಶ್ರೀ ರಾಮ್” ಎಂಬ ಹೆಸರಿನ ಚಾಲಕ ಪ್ರತ್ಯೇಕ ಘಟನೆಗಳಲ್ಲಿ ಮುಸ್ಲಿಂ ಪ್ರಯಾಣಿಕರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಿದ್ದಾಗಿ ಹೇಳಿಕೊಮಡು ಹೆಮ್ಮೆಪಡುತ್ತಾನೆ ಎಂದು ವಕೀಲರು ಆರೋಪಿಸಿದ್ದಾರೆ. ಅಂತಹ ಒಂದು ಪ್ರಕರಣದಲ್ಲಿ ಆತ “ಅನ್ಸಾರಿ-ವನ್ಸಾರಿ” ಎಂಬ ಪ್ರಯಾಣಿಕನ ಮೇಲೆ ರಸ್ತೆಬದಿಯ ಧಾಬಾದಲ್ಲಿ ಹೊಡೆದಿದ್ದಾಗಿ ಅವರು ಹೇಳಿಕೊಂಡರು. ಇತರರು ಕೂಡ ಹಲ್ಲೆಗೆ ಸಹಕರಿಸಿದ್ದರು. ನೋಯ್ಡಾದಲ್ಲಿ ನಡೆದ ಮತ್ತೊಂದು ಘಟನೆ ಕುರಿತು ಕೂಡ ಚಾಲಕ ವಿವರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿತ ಬಲಿಪಶುಗಳ ಧಾರ್ಮಿಕ ಗುರುತನ್ನು ಚಾಲಕ ಪದೇ ಪದೇ ಒತ್ತಿ ಹೇಳಿದ್ದು, “ಅಂತಹ ಜನರಿಗೆ ಪಾಠ ಕಲಿಸಿದ್ದಕ್ಕಾಗಿ” ಉತ್ತರ ಪ್ರದೇಶ ಸರ್ಕಾರವನ್ನು ಹೊಗಳಿದ ಎಂದು ಹೇಳಿದ್ದಾರೆ.

ವಕೀಲರ ಪ್ರಕಾರ, ಚಾಲಕನ ಹೇಳಿಕೆಗಳು ಉದ್ದೇಶಪೂರ್ವಕ ಮತ್ತು ಇಸ್ಲಾಮೋಫೋಬಿಯಾದ ಮಾದರಿಯನ್ನು ಪ್ರತಿಬಿಂಬಿಸುತ್ತವೆ, ಇದು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಎಚ್ಚರಿಕೆ ಮೂಡಿಸಿದೆ ಎಂದು ವರದಿಯಾಗಿದೆ.

ದೂರಿನ ನಂತರ, ಓಲಾ ಸಂಸ್ಥೆಯು ಚಾಲಕನನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಆದರೂ, ಕಂಪನಿಯ ಪ್ರತಿಕ್ರಿಯೆ ಟೀಕೆಗೆ ಗುರಿಯಾಗಿದೆ.

ಇಮೇಲ್‌ನಲ್ಲಿ ಬರೆದಿರುವ ಓಲಾ, “ನಿಮಗೆ ಇಂತಹ ಅಹಿತಕರ ಅನುಭವ ಸಿಕ್ಕಿದ್ದಕ್ಕೆ ನಮಗೆ ವಿಷಾದವಿದೆ… ಅಸುರಕ್ಷಿತ ನಡವಳಿಕೆಗಾಗಿ ನಾವು ಪ್ರಶ್ನೆಯಲ್ಲಿರುವ ಚಾಲಕನನ್ನು ಅಮಾನತುಗೊಳಿಸಿದ್ದೇವೆ” ಎಮದು ಹೇಳಿದೆ.

ಈ ಪ್ರತಿಕ್ರಿಯೆಯನ್ನು “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಎಂದು ಮೆಹಮೂದ್ ಹೇಳಿದ್ದಾರೆ. ಇದು ಕೋಮು ಹಿಂಸಾಚಾರದ ಬಗ್ಗೆ ಕಳವಳ ಮತ್ತು ಅಂತಹ ನಡವಳಿಕೆಯನ್ನು ತಡೆಗಟ್ಟಲು ವ್ಯವಸ್ಥಿತ ಸುರಕ್ಷತಾ ಕ್ರಮಗಳನ್ನು ಒಳಗೊಂಡಂತೆ ಘಟನೆಯ ಗಂಭೀರತೆಯನ್ನು ಪರಿಹರಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಕಂಪನಿಯ ಪ್ರಯಾಣಿಕರ ಸುರಕ್ಷತಾ ನೀತಿಗಳು ಮತ್ತು ಧರ್ಮದ ಆಧಾರದ ಮೇಲೆ ಚಾಲಕರು ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವುದನ್ನು ತಡೆಯಲು ಇರುವ ಕಾರ್ಯವಿಧಾನಗಳನ್ನು ಸಹ ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ದ್ವೇಷಪೂರಿತ ನಡವಳಿಕೆಗೆ ಈ ಘಟನೆಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ಗುರಿಯಾಗಿಸುವುದು, ಹಿಂಸಾಚಾರವನ್ನು ವೈಭವೀಕರಿಸುವುದು ತೀವ್ರವಾಗಿ ಖಂಡನೀಯ ಮಾತ್ರವಲ್ಲದೆ ಕಾನೂನಿನ ನಿಯಮ ಮತ್ತು ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವ ಗಂಭೀರ ಅಪರಾಧ ವಿಷಯವಾಗಿದೆ ಎಂದಿದ್ದಾರೆ.

ಇಂತಹ ಕೃತ್ಯಗಳು ಕಟ್ಟುನಿಟ್ಟಾದ ಹೊಣೆಗಾರಿಕೆಯನ್ನು ಒಳಗೊಂಡ ವ್ಯಕ್ತಿಗಳಿಂದ ಮಾತ್ರವಲ್ಲದೆ, ತಾರತಮ್ಯ ಮತ್ತು ಬೆದರಿಕೆಯ ವಿರುದ್ಧ ಬಲವಾದ ಸುರಕ್ಷತೆಗಳನ್ನು ಖಚಿತಪಡಿಸಿಕೊಳ್ಳಬೇಕಾದ ಸೇವಾ ಪೂರೈಕೆದಾರರಿಂದಲೂ ಬಯಸುತ್ತವೆ. ಎಲ್ಲಾ ಪ್ರಯಾಣಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಗುರುತನ್ನು ಲೆಕ್ಕಿಸದೆ, ನಿರ್ಲಕ್ಷಿಸಲಾಗದ ಮೂಲಭೂತ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...