Homeಮುಖಪುಟಆಂಡ್ರಾಯ್ಡ್, ಐಫೋನ್‌ಗಳಲ್ಲಿ ದರ ವ್ಯತ್ಯಾಸ ಆರೋಪ : ಓಲಾ, ಊಬರ್‌ಗೆ ನೋಟಿಸ್

ಆಂಡ್ರಾಯ್ಡ್, ಐಫೋನ್‌ಗಳಲ್ಲಿ ದರ ವ್ಯತ್ಯಾಸ ಆರೋಪ : ಓಲಾ, ಊಬರ್‌ಗೆ ನೋಟಿಸ್

ಸ್ವಿಗ್ಗಿ, ಝೊಮ್ಯಾಟೋ ವಿರುದ್ದ ಸಿಸಿಐ ಮೊರೆ

- Advertisement -
- Advertisement -

ದರ ವ್ಯತ್ಯಾಸ ಆರೋಪಕ್ಕೆ ಸಂಬಂಧಿಸಿದಂತೆ ಆ್ಯಪ್‌ ಆಧಾರಿತ ಕ್ಯಾಬ್ ಸೇವೆ ಒದಗಿಸುತ್ತಿರುವ ಓಲಾ ಮತ್ತು ಊಬರ್ ಕಂಪನಿಗಳಿಗೆ ಕೇಂದ್ರ ಗ್ರಾಹಕರ ಹಿತರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ನೀಡಿದೆ.

ಆ್ಯಪ್‌ ಬಳಕೆದಾರರು ಐಫೋನ್‌ನಲ್ಲಿ ಬುಕ್ಕಿಂಗ್ ಮಾಡುತ್ತಿದ್ದಾರೆಯೇ ಅಥವಾ ಆಂಡ್ರಾಯ್ಡ್ ಫೋನ್‌ನಲ್ಲಿ ಬುಕ್ಕಿಂಗ್ ಮಾಡುತ್ತಿದ್ದಾರೆಯೇ ಎಂಬ ಆಧಾರದ ಮೇಲೆ ಕಂಪನಿಗಳು ಒಂದೇ ಸ್ಥಳಕ್ಕೆ ವಿಭಿನ್ನ ದರ ನಿಗದಿಪಡಿಸುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ದರ ವ್ಯತ್ಯಾಸದ ಮೂಲಕ ಕಂಪನಿಗಳು ಗ್ರಾಹಕರ ಹಕ್ಕುಗಳಿಗೆ ವಂಚಿಸುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆರೋಪಗಳನ್ನು ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಪಿಎ ವಿಚಾರಣೆ ಕೈಗೆತ್ತಿಕೊಂಡಿದ್ದು, ಎರಡು ಕಂಪನಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ದರ ವ್ಯತ್ಯಾಸದ ಆರೋಪಗಳ ಸಂಬಂಧ ಗ್ರಾಹಕ ವ್ಯವಹಾರಗಳ ಇಲಾಖೆಯು ಸಿಸಿಪಿಎ ಮೂಲಕ ಓಲಾ ಮತ್ತು ಊಬರ್ ಕಂಪನಿಗಳಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ತಿಳಿಸಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ವಿರುದ್ದ ಸಿಸಿಐ ಮೊರೆ

ಸ್ವಿಗ್ಗಿ ಮತ್ತು ಝೊಮ್ಯಾಟೋ ಕಂಪನಿಯು ಖಾಸಗಿ ಲೇಬಲ್ ಬಳಕೆ ಮೂಲಕ ನ್ಯಾಯಸಮ್ಮತವಲ್ಲದ ವ್ಯಾಪಾರದಲ್ಲಿ ತೊಡಗಿವೆ ಎಂದು ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘ (ಎನ್‌ಆರ್‌ಎಐ) ಆರೋಪಿಸಿದೆ. ಈ ಕುರಿತು ಭಾರತೀಯ ಸ್ಪರ್ಧಾತ್ಕ ಆಯೋಗಕ್ಕೆ(ಸಿಸಿಐ) ದೂರು ಸಲ್ಲಿಸಲು ಮುಂದಾಗಿದೆ.

ಆನ್‌ಲೈನ್‌ನಲ್ಲಿ ಆಹಾರ ವಿತರಿಸುವ ಈ ಕಂಪನಿಗಳು ತಮ್ಮ ಪಾಲುದಾರ ರೆಸ್ಟೋರೆಂಟ್‌ಗಳಿಂದ ದತ್ತಾಂಶ ಸಂಗ್ರಹಿಸುತ್ತವೆ. ನಮ್ಮ ಗ್ರಾಹಕರು ಯಾರೆಂದು ಅವುಗಳಿಗೆ ಸ್ಪಷ್ಟವಾದ ಅರಿವಿದೆ. ಆದರೆ, ಈ ಮಾಹಿತಿ ಹಂಚಿಕೊಳ್ಳಲು ನಿರಾಕರಿಸುತ್ತಿವೆ. ಇದೇ ರೀತಿಯ ಉತ್ಪನ್ನಗಳನ್ನು ತಯಾರಿಸಿ ಖಾಸಗಿ ಲೇಬಲ್ ಅಂಟಿಸುವ ಮೂಲಕ ಮಾರಾಟ ಮಾಡುವ ಸಾಧ್ಯತೆಯಿದೆ. ಇದರಿಂದ ರೆಸ್ಟೋರೆಂಟ್ ವಲಯವು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಸಂಘದ ಅಧ್ಯಕ್ಷ ಸಾಗರ್ ದರಿಯಾನಿ ಆತಂಕ ವ್ಯಕ್ತಪಡಿಸಿದ್ದಾರೆ.

ಝೆಪ್ಟೋ ವಿರುದ್ದ ದರ ವ್ಯತ್ಯಾಸ ಆರೋಪ

ಓಲಾ, ಊಬರ್‌ಗಳಂತೆ ಆಹಾರ ಸಾಮಾಗ್ರಿಗಳ ವಿತರಣ ಆ್ಯಪ್‌ ಝೆಪ್ಟೋ ಕೂಡ ಒಂದೇ ವಸ್ತುವಿಗೆ ಐಫೋನ್, ಆಂಡ್ರಾಯ್ಡ್ ಗ್ರಾಹಕರಿಗೆ ಬೇರೆ ಬೇರೆ ದರಗಳನ್ನು ನಿಗದಿ ಮಾಡಿ ಮೋಸ ಮಾಡುತ್ತಿವೆ ಎಂದು ಬೆಂಗಳೂರು ಮೂಲದ ಮಹಿಳೆಯೊಬ್ಬರು ಇತ್ತೀಚೇಗೆ ವಿಡಿಯೋ ಮೂಲಕ ಆರೋಪಿಸಿದ್ದರು.

ಬಿರಿಯಾನಿ ವಿವಾದ: ಪೊಲೀಸರೊಂದಿಗೆ ನವಾಸ್ ಕಾನಿ ಮಾತನಾಡುತ್ತಿರುವ ವಿಡಿಯೋ ಪೋಸ್ಟ್‌ ಮಾಡಿದ ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...