Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರಾದ ಸಫಿಯಾ ಫಿರೋಜಿ ಅವರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಟ್ವಿಟರ್ ಬಳಕೆದಾರರು ಇತ್ತೀಚೆಗೆ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. “ಸಫಿಯಾ ಫಿರೋಜಿ, ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರು. ಇಂದು ಬೆಳಿಗ್ಗೆ ಅವರನ್ನು ಸಾರ್ವಜನಿಕವಾಗಿ ಕಲ್ಲೆಸೆದು ಸಾಯಿಸಲಾಗಿದೆ” ಎಂದು ಆಗಸ್ಟ್ 18 ರಂದು ಸಂಗೀತಾ ಸಾಗರ್‌ ಎಂಬುವರು ಹಂಚಿಕೊಂಡಿದ್ದಾರೆ.

ಇದೇ ರೀತಿ ಹಲವು ಮಂದಿ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕಂಡು ಬಂದದ್ದು, ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಚಿತ್ರ 2018ರಲ್ಲಿ ನಡೆದ ಪ್ರತಿಭನಟನೆಯ ವರದಿಯಲ್ಲಿ ಕಾಣಿಸಿಕೊಂಡಿದೆ.  ಇದು ಕಾಬೂಲ್‌ನಲ್ಲಿ ನಡೆದ ಫರ್ಖುಂಡಾ ಹತ್ಯಾಕಾಂಡದ ಚಿತ್ರ ಎಂಬ ವರದಿಗಳು ಸಿಕ್ಕಿವೆ.

ವರದಿಗಳ ಪ್ರಕಾರ, ಮುಗ್ಧ ಯುವತಿಯ ಹತ್ಯೆಯಾದ ಮೂರನೇ ವರ್ಷದ ಸ್ಮರಣಾರ್ಥವಾಗಿ ಸ್ಥಳೀಯರು ಫರ್ಖುಂಡಾ ಸ್ಮಾರಕದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ, ಚಿತ್ರಹಿಂಸೆಗೆ ಬಲಿಯಾದ ಫರ್ಖುಂಡಾ, ರುಖ್ಶಾನಾ, ಶುಕ್ರಿಯಾ ತಬಸುಮ್, ಮಿರ್ಜಾಲಾಂಗ್ ಇತರ ಸಂತ್ರಸ್ತ ಮಹಿಳೆಯರಿಗೆ ನಡೆದ ಅನ್ಯಾಯವನ್ನು ಖಂಡಿಸುವ ಪೋಸ್ಟರ್‌ಗಳನ್ನು ಈ ವರದಿಯಲ್ಲಿ ನೋಡಬಹುದು. ಈ ಪೋಸ್ಟರ್‌ಗಳಲ್ಲಿ  ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ನಲ್ಲಿರುವ ಮಹಿಳೆಯನ್ನು ಹೋಲುತ್ತದೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಇನ್ನು ಮುಂದಿನ ಹುಡುಕಾಟದಿಂದ ಈ ಚಿತ್ರ ಡಿಸೆಂಬರ್ 26, 2015 ರ ದಿ ನ್ಯೂಯಾರ್ಕ್ ಟೈಮ್ಸ್ ನ ವಿಡಿಯೊದಲ್ಲಿ ದೊರಕಿದೆ. ಇದರಲ್ಲಿ ನಿರೂಪಕ “27 ವರ್ಷದ ಮುಸ್ಲಿಂ ಮಹಿಳೆ ಫರ್ಖುಂಡಾ ಮಲಿಕ್ಜಾಡಾರನ್ನು ಖುರಾನ್ ಸುಟ್ಟ ಆರೋಪದ ಮೇಲೆ ಕೊಲ್ಲಲಾಯಿತು. ಈ ಘಟನೆಯನ್ನು ಸಾವಿರಾರು ಜನರು ವೀಕ್ಷಿಸಿದರು” ಎಂದು ವಿವರಿಸುತ್ತಾರೆ.

ಮೇ 2015 ರ ಬಿಬಿಸಿ ವರದಿಯು ಫರ್ಖುಂಡಾ ಮಲಿಕ್ಜಾಡಾ ಮಾರ್ಚ್ 19 ರಂದು ನಿಧನರಾದರು ಎಂದು ತಿಳಿಸುತ್ತದೆ. ಕುರಾನ್ ಅನ್ನು ಸುಟ್ಟ ತಪ್ಪು ಆರೋಪದಲ್ಲಿ ಈಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ 19 ಮಂದಿ ಪೊಲೀಸ್ ಅಧಿಕಾರಿಗಳು ಸೇರಿ 49 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವರದಿಯ ಪ್ರಕಾರ, “ಮೂವರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ, ಎಂಟು ಮಂದಿಗೆ 16 ವರ್ಷಗಳ ಜೈಲು ಶಿಕ್ಷೆ ಮತ್ತು ಅಪ್ರಾಪ್ತ ವಯಸ್ಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 11 ಪೋಲಿಸ್ ಅಧಿಕಾರಿಗಳಿಗೆ ಫರ್ಖುಂಡಾಕ್ಕೆ ಭದ್ರತೆ ನೀಡಲು ವಿಫಲವಾದ ಕಾರಣಕ್ಕೆ ತಲಾ ಒಂದು ವರ್ಷ ಶಿಕ್ಷೆ ವಿಧಿಸಲಾಗಿತ್ತು.

ವೈರಲ್ ಪೋಸ್ಟ್‌ಗಳಲ್ಲಿ ಫರ್ಖುಂಡಾ ಮಲಿಕ್ಜಾಡಾ ಅವರನ್ನು ಸಫಿಯಾ ಫಿರೋಜಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಸಫಿಯಾ ಫಿರೋಜಿ ಅಫ್ಘಾನಿಸ್ತಾನದ ಎರಡನೇ ಮಹಿಳಾ ಪೈಲಟ್ ಆಗಿ ಪ್ರಾಮುಖ್ಯತೆ ಪಡೆದಿದ್ದರು. 1990 ರಲ್ಲಿ ಫಿರೋಜಿ ಮತ್ತು ಆಕೆಯ ಕುಟುಂಬ ಕಾಬೂಲ್‌ನಿಂದ ಪಲಾಯನ ಮಾಡಿತ್ತು. 2001 ರಲ್ಲಿ ತಾಲಿಬಾನ್ ಪತನದ ನಂತರ, ಅವರು ಕಾಬೂಲ್‌ಗೆ ಮರಳಿದರು. ಆದರೆ, ಸಫಿಯಾ ಸಾವಿನ ದೃಢೀರಣಕ್ಕೆ ನಮಗೆ ಯಾವುದೇ ನಂಬಲರ್ಹವಾದ ವರದಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದ ಮೊದಲ ಮಹಿಳಾ ಪೈಲಟ್ ಹೆಸರು ನಿಲೂಫರ್ ರಹ್ಮಾನಿ, ಮಹಿಳಾ ಹಕ್ಕುಗಳ ಮೇಲೆ ತಾಲಿಬಾನ್ ಪ್ರಚಾರವನ್ನು ನಂಬಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ, ಇದರಿಂದ ಫರ್ಖುಂಡಾ ಮಲಿಕ್ಜಾಡಾ ಅವರ ಹಳೆಯ ಚಿತ್ರವನ್ನು ಅಫ್ಘಾನಿಸ್ತಾನದ ಮಹಿಳಾ ಪೈಲಟ್ ಸಫಿಯಾ ಫಿರೋಜಿ, ತಾಲಿಬಾನಿಗಳು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...