Homeಮುಖಪುಟಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

- Advertisement -
- Advertisement -

“ಹಳೆಯ ರಾಜಕಾರಣ” ಸತ್ತಿದ್ದು, ಈಗ ಹೊಸ ರಾಜಕಾರಣವನ್ನು ಪ್ರಾರಂಭಿಸುವಂತಹ ಸವಾಲಿನ ಕೆಲಸದ ಅಗತ್ಯವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದು, ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ರಾಜಕೀಯವು ಮೂಲಭೂತವಾಗಿ ಬದಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಹಳೆ ರಾಜಕಾರಣ

“ಒಂದು ದಶಕದ ಹಿಂದೆ ಅನ್ವಯಿಸಿದ ನಿಯಮಗಳು ಇನ್ನು ಮುಂದೆ ಅನ್ವಯಿಸಲು ಸಾಧ್ಯವಿಲ್ಲ; ಅವು ಬಂಡವಾಳ, ಆಧುನಿಕ ಮಾಧ್ಯಮ ಮತ್ತು ಆಧುನಿಕ ಸಾಮಾಜಿಕ ಮಾಧ್ಯಮಗಳ ಕೇಂದ್ರೀಕರಣವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“10 ವರ್ಷಗಳ ಹಿಂದೆ ಪರಿಣಾಮಕಾರಿಯಾಗಿದ್ದ ಮತ್ತು 10 ವರ್ಷಗಳ ಹಿಂದೆ ಕೆಲಸ ಮಾಡಿದ ಸಾಧನಗಳು ಇಂದು ಕಾರ್ಯನಿರ್ವಹಿಸುವುದಿಲ್ಲ. ಒಂದು ಅರ್ಥದಲ್ಲಿ, ಹಳೆಯ ರಾಜಕಾರಣ ಸತ್ತಿದೆ ಹಾಗಾಗಿ ಈಗ ಹೊಸ ರೀತಿಯ ರಾಜಕಾರಣವನ್ನು ನಿರ್ಮಿಸಬೇಕು.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ತೆಲಂಗಾಣ ಸರ್ಕಾರ ಆಯೋಜಿಸಿದ್ದ ಮತ್ತು ಜಗತ್ತಿನಾದ್ಯಂತ ಸುಮಾರು 100 ಪ್ರಗತಿಪರ ಪಕ್ಷಗಳು ಭಾಗವಹಿಸಿದ್ದ ಭಾರತ್ ಶೃಂಗಸಭೆ 2025 ರ ಸಮಗ್ರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.

ಶೃಂಗಸಭೆಯು ಹವಾಮಾನ ನ್ಯಾಯ, ಲಿಂಗ ನ್ಯಾಯ, ತಂತ್ರಜ್ಞಾನ, ಬಹುಪಕ್ಷೀಯತೆ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ, ಯುವ ಅಭಿವೃದ್ಧಿ, ಶಾಂತಿ ಮತ್ತು ನ್ಯಾಯವನ್ನು ಚರ್ಚಿಸಿದೆ. ರಾಜಕೀಯದಲ್ಲಿ ಬದಲಾಗುತ್ತಿರುವ ಮಾದರಿಗಳು ಮತ್ತು ಪ್ರಜಾಪ್ರಭುತ್ವದಲ್ಲಿ ಮರಳಿ ಪಡೆಯುವಂತಹ ಹೊಸ ವಿಚಾರಗಳ ಬಗ್ಗೆ ಪ್ರಗತಿಪರ ಪಕ್ಷಗಳು ಚರ್ಚಿಸಬೇಕೆಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಈ ವೇಳೆ ರಾಹುಲ್ ಗಾಂಧಿ ಅವರು ದ್ವೇಷದ ರಾಜಕೀಯವನ್ನು ಎದುರಿಸಲು ಒಂದು ಚೌಕಟ್ಟನ್ನು ಸಹ ವಿವರಿಸಿದ್ದಾರೆ. ಯಾರಾದರೂ ಎಷ್ಟೇ ದ್ವೇಷವನ್ನು ಹರಡಿದರೂ, ಅದನ್ನು ತಡೆಯುವ ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವರನ್ನು ನಕಲಿಸುವುದಾಗಲಿ, ಅವರೊಂದಿಗೆ ವಾದಿಸುವುದಾಗಲಿ ಅಥವಾ ಅವರೊಂದಿಗೆ ಹೋರಾಡುವುದಾಗಲಿ ಅಲ್ಲ, ಬದಲಿಗೆ ಪ್ರೀತಿಯ ಕಲ್ಪನೆಯನ್ನು ದ್ವೇಷದ ಮುಂದೆ ಇಡುವುದು ಎಂದು ಅವರು ಹೇಳಿದ್ದಾರೆ.

ಅದು ನಮ್ಮ ರಾಜಕೀಯಕ್ಕೆ ಸಂಭಾವ್ಯ ಚೌಕಟ್ಟು ಎಂದು ನಾನು ಭಾವಿಸುತ್ತೇನೆ; ನಾವು ನೀತಿಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದೇವೆ. ವಿರೋಧ ಪಕ್ಷಗಳ (ಕಾಂಗ್ರೆಸ್‌ನ ರಾಜಕೀಯ ವಿರೋಧಿಗಳನ್ನು ಉಲ್ಲೇಖಿಸಿ) ಕೋನ ಭಯ, ಕೋಪ ಮತ್ತು ದ್ವೇಷವಾಗಿದ್ದರೆ, ಕಾಂಗ್ರೆಸ್ ಮತ್ತು ಪ್ರಗತಿಪರ ಪಕ್ಷಗಳ ದೃಷ್ಟಿಕೋನ ಪ್ರೀತಿ ಮತ್ತು ವಾತ್ಸಲ್ಯವಾಗಿರಬೇಕು ಎಂದು ರಾಹುಲ್ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ, ಕಾಂಗ್ರೆಸ್ ಸಂಪೂರ್ಣವಾಗಿ “ಹೊಸ ರಾಜಕೀಯ”ದಲ್ಲಿ ಸಿಲುಕಿಕೊಂಡಿತ್ತು. ಮಾಧ್ಯಮದಂತಹ ಎಲ್ಲಾ ಮಾರ್ಗಗಳು ಅವುಗಳ ಜೊತೆಗೆ ರಾಜಿ ಮಾಡಿಕೊಂಡವು. ಆಗ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4,000 ಕಿಲೋಮೀಟರ್ ಉದ್ದದ ಭಾರತ್ ಜೋಡೋ ಯಾತ್ರೆಯನ್ನು ಕೈಗೊಳ್ಳಲು ಮತ್ತು ಜನಸಾಮಾನ್ಯರೊಂದಿಗೆ ನೇರ ಸಂವಹನ ನಡೆಸಲು ನಿರ್ಧರಿಸಿತು ಎಂದು ಅವರು ಹೇಳಿದ್ದಾರೆ.

“ಪ್ರಪಂಚದಾದ್ಯಂತ ನಮ್ಮ ವಿರೋಧ ಪಕ್ಷಗಳು ಕೋಪ, ಭಯ ಮತ್ತು ದ್ವೇಷದ ಮೇಲೆ ಏಕಸ್ವಾಮ್ಯವನ್ನು ಹೊಂದಿದೆ. ಮತ್ತು ನಾವು ಕೋಪ, ಭಯ ಮತ್ತು ದ್ವೇಷದ ಮೇಲೆ ಅವರೊಂದಿಗೆ ಸ್ಪರ್ಧಿಸಲು ಸಾಧ್ಯವೆ ಇಲ್ಲ, ಏಕೆಂದರೆ ಅವರೆಲ್ಲರೂ ನಮ್ಮನ್ನು ಅದರಲ್ಲಿ ಮೀರಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹಳೆ ರಾಜಕಾರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...