Homeಮುಖಪುಟಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

- Advertisement -
- Advertisement -

“ಹಳೆಯ ರಾಜಕಾರಣ” ಸತ್ತಿದ್ದು, ಈಗ ಹೊಸ ರಾಜಕಾರಣವನ್ನು ಪ್ರಾರಂಭಿಸುವಂತಹ ಸವಾಲಿನ ಕೆಲಸದ ಅಗತ್ಯವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದು, ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ರಾಜಕೀಯವು ಮೂಲಭೂತವಾಗಿ ಬದಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಹಳೆ ರಾಜಕಾರಣ

“ಒಂದು ದಶಕದ ಹಿಂದೆ ಅನ್ವಯಿಸಿದ ನಿಯಮಗಳು ಇನ್ನು ಮುಂದೆ ಅನ್ವಯಿಸಲು ಸಾಧ್ಯವಿಲ್ಲ; ಅವು ಬಂಡವಾಳ, ಆಧುನಿಕ ಮಾಧ್ಯಮ ಮತ್ತು ಆಧುನಿಕ ಸಾಮಾಜಿಕ ಮಾಧ್ಯಮಗಳ ಕೇಂದ್ರೀಕರಣವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“10 ವರ್ಷಗಳ ಹಿಂದೆ ಪರಿಣಾಮಕಾರಿಯಾಗಿದ್ದ ಮತ್ತು 10 ವರ್ಷಗಳ ಹಿಂದೆ ಕೆಲಸ ಮಾಡಿದ ಸಾಧನಗಳು ಇಂದು ಕಾರ್ಯನಿರ್ವಹಿಸುವುದಿಲ್ಲ. ಒಂದು ಅರ್ಥದಲ್ಲಿ, ಹಳೆಯ ರಾಜಕಾರಣ ಸತ್ತಿದೆ ಹಾಗಾಗಿ ಈಗ ಹೊಸ ರೀತಿಯ ರಾಜಕಾರಣವನ್ನು ನಿರ್ಮಿಸಬೇಕು.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ತೆಲಂಗಾಣ ಸರ್ಕಾರ ಆಯೋಜಿಸಿದ್ದ ಮತ್ತು ಜಗತ್ತಿನಾದ್ಯಂತ ಸುಮಾರು 100 ಪ್ರಗತಿಪರ ಪಕ್ಷಗಳು ಭಾಗವಹಿಸಿದ್ದ ಭಾರತ್ ಶೃಂಗಸಭೆ 2025 ರ ಸಮಗ್ರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.

ಶೃಂಗಸಭೆಯು ಹವಾಮಾನ ನ್ಯಾಯ, ಲಿಂಗ ನ್ಯಾಯ, ತಂತ್ರಜ್ಞಾನ, ಬಹುಪಕ್ಷೀಯತೆ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ, ಯುವ ಅಭಿವೃದ್ಧಿ, ಶಾಂತಿ ಮತ್ತು ನ್ಯಾಯವನ್ನು ಚರ್ಚಿಸಿದೆ. ರಾಜಕೀಯದಲ್ಲಿ ಬದಲಾಗುತ್ತಿರುವ ಮಾದರಿಗಳು ಮತ್ತು ಪ್ರಜಾಪ್ರಭುತ್ವದಲ್ಲಿ ಮರಳಿ ಪಡೆಯುವಂತಹ ಹೊಸ ವಿಚಾರಗಳ ಬಗ್ಗೆ ಪ್ರಗತಿಪರ ಪಕ್ಷಗಳು ಚರ್ಚಿಸಬೇಕೆಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಈ ವೇಳೆ ರಾಹುಲ್ ಗಾಂಧಿ ಅವರು ದ್ವೇಷದ ರಾಜಕೀಯವನ್ನು ಎದುರಿಸಲು ಒಂದು ಚೌಕಟ್ಟನ್ನು ಸಹ ವಿವರಿಸಿದ್ದಾರೆ. ಯಾರಾದರೂ ಎಷ್ಟೇ ದ್ವೇಷವನ್ನು ಹರಡಿದರೂ, ಅದನ್ನು ತಡೆಯುವ ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವರನ್ನು ನಕಲಿಸುವುದಾಗಲಿ, ಅವರೊಂದಿಗೆ ವಾದಿಸುವುದಾಗಲಿ ಅಥವಾ ಅವರೊಂದಿಗೆ ಹೋರಾಡುವುದಾಗಲಿ ಅಲ್ಲ, ಬದಲಿಗೆ ಪ್ರೀತಿಯ ಕಲ್ಪನೆಯನ್ನು ದ್ವೇಷದ ಮುಂದೆ ಇಡುವುದು ಎಂದು ಅವರು ಹೇಳಿದ್ದಾರೆ.

ಅದು ನಮ್ಮ ರಾಜಕೀಯಕ್ಕೆ ಸಂಭಾವ್ಯ ಚೌಕಟ್ಟು ಎಂದು ನಾನು ಭಾವಿಸುತ್ತೇನೆ; ನಾವು ನೀತಿಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದೇವೆ. ವಿರೋಧ ಪಕ್ಷಗಳ (ಕಾಂಗ್ರೆಸ್‌ನ ರಾಜಕೀಯ ವಿರೋಧಿಗಳನ್ನು ಉಲ್ಲೇಖಿಸಿ) ಕೋನ ಭಯ, ಕೋಪ ಮತ್ತು ದ್ವೇಷವಾಗಿದ್ದರೆ, ಕಾಂಗ್ರೆಸ್ ಮತ್ತು ಪ್ರಗತಿಪರ ಪಕ್ಷಗಳ ದೃಷ್ಟಿಕೋನ ಪ್ರೀತಿ ಮತ್ತು ವಾತ್ಸಲ್ಯವಾಗಿರಬೇಕು ಎಂದು ರಾಹುಲ್ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ, ಕಾಂಗ್ರೆಸ್ ಸಂಪೂರ್ಣವಾಗಿ “ಹೊಸ ರಾಜಕೀಯ”ದಲ್ಲಿ ಸಿಲುಕಿಕೊಂಡಿತ್ತು. ಮಾಧ್ಯಮದಂತಹ ಎಲ್ಲಾ ಮಾರ್ಗಗಳು ಅವುಗಳ ಜೊತೆಗೆ ರಾಜಿ ಮಾಡಿಕೊಂಡವು. ಆಗ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4,000 ಕಿಲೋಮೀಟರ್ ಉದ್ದದ ಭಾರತ್ ಜೋಡೋ ಯಾತ್ರೆಯನ್ನು ಕೈಗೊಳ್ಳಲು ಮತ್ತು ಜನಸಾಮಾನ್ಯರೊಂದಿಗೆ ನೇರ ಸಂವಹನ ನಡೆಸಲು ನಿರ್ಧರಿಸಿತು ಎಂದು ಅವರು ಹೇಳಿದ್ದಾರೆ.

“ಪ್ರಪಂಚದಾದ್ಯಂತ ನಮ್ಮ ವಿರೋಧ ಪಕ್ಷಗಳು ಕೋಪ, ಭಯ ಮತ್ತು ದ್ವೇಷದ ಮೇಲೆ ಏಕಸ್ವಾಮ್ಯವನ್ನು ಹೊಂದಿದೆ. ಮತ್ತು ನಾವು ಕೋಪ, ಭಯ ಮತ್ತು ದ್ವೇಷದ ಮೇಲೆ ಅವರೊಂದಿಗೆ ಸ್ಪರ್ಧಿಸಲು ಸಾಧ್ಯವೆ ಇಲ್ಲ, ಏಕೆಂದರೆ ಅವರೆಲ್ಲರೂ ನಮ್ಮನ್ನು ಅದರಲ್ಲಿ ಮೀರಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹಳೆ ರಾಜಕಾರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...