Homeಮುಖಪುಟಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

- Advertisement -
- Advertisement -

“ಹಳೆಯ ರಾಜಕಾರಣ” ಸತ್ತಿದ್ದು, ಈಗ ಹೊಸ ರಾಜಕಾರಣವನ್ನು ಪ್ರಾರಂಭಿಸುವಂತಹ ಸವಾಲಿನ ಕೆಲಸದ ಅಗತ್ಯವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದು, ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ರಾಜಕೀಯವು ಮೂಲಭೂತವಾಗಿ ಬದಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಹಳೆ ರಾಜಕಾರಣ

“ಒಂದು ದಶಕದ ಹಿಂದೆ ಅನ್ವಯಿಸಿದ ನಿಯಮಗಳು ಇನ್ನು ಮುಂದೆ ಅನ್ವಯಿಸಲು ಸಾಧ್ಯವಿಲ್ಲ; ಅವು ಬಂಡವಾಳ, ಆಧುನಿಕ ಮಾಧ್ಯಮ ಮತ್ತು ಆಧುನಿಕ ಸಾಮಾಜಿಕ ಮಾಧ್ಯಮಗಳ ಕೇಂದ್ರೀಕರಣವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“10 ವರ್ಷಗಳ ಹಿಂದೆ ಪರಿಣಾಮಕಾರಿಯಾಗಿದ್ದ ಮತ್ತು 10 ವರ್ಷಗಳ ಹಿಂದೆ ಕೆಲಸ ಮಾಡಿದ ಸಾಧನಗಳು ಇಂದು ಕಾರ್ಯನಿರ್ವಹಿಸುವುದಿಲ್ಲ. ಒಂದು ಅರ್ಥದಲ್ಲಿ, ಹಳೆಯ ರಾಜಕಾರಣ ಸತ್ತಿದೆ ಹಾಗಾಗಿ ಈಗ ಹೊಸ ರೀತಿಯ ರಾಜಕಾರಣವನ್ನು ನಿರ್ಮಿಸಬೇಕು.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ತೆಲಂಗಾಣ ಸರ್ಕಾರ ಆಯೋಜಿಸಿದ್ದ ಮತ್ತು ಜಗತ್ತಿನಾದ್ಯಂತ ಸುಮಾರು 100 ಪ್ರಗತಿಪರ ಪಕ್ಷಗಳು ಭಾಗವಹಿಸಿದ್ದ ಭಾರತ್ ಶೃಂಗಸಭೆ 2025 ರ ಸಮಗ್ರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.

ಶೃಂಗಸಭೆಯು ಹವಾಮಾನ ನ್ಯಾಯ, ಲಿಂಗ ನ್ಯಾಯ, ತಂತ್ರಜ್ಞಾನ, ಬಹುಪಕ್ಷೀಯತೆ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ, ಯುವ ಅಭಿವೃದ್ಧಿ, ಶಾಂತಿ ಮತ್ತು ನ್ಯಾಯವನ್ನು ಚರ್ಚಿಸಿದೆ. ರಾಜಕೀಯದಲ್ಲಿ ಬದಲಾಗುತ್ತಿರುವ ಮಾದರಿಗಳು ಮತ್ತು ಪ್ರಜಾಪ್ರಭುತ್ವದಲ್ಲಿ ಮರಳಿ ಪಡೆಯುವಂತಹ ಹೊಸ ವಿಚಾರಗಳ ಬಗ್ಗೆ ಪ್ರಗತಿಪರ ಪಕ್ಷಗಳು ಚರ್ಚಿಸಬೇಕೆಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಈ ವೇಳೆ ರಾಹುಲ್ ಗಾಂಧಿ ಅವರು ದ್ವೇಷದ ರಾಜಕೀಯವನ್ನು ಎದುರಿಸಲು ಒಂದು ಚೌಕಟ್ಟನ್ನು ಸಹ ವಿವರಿಸಿದ್ದಾರೆ. ಯಾರಾದರೂ ಎಷ್ಟೇ ದ್ವೇಷವನ್ನು ಹರಡಿದರೂ, ಅದನ್ನು ತಡೆಯುವ ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವರನ್ನು ನಕಲಿಸುವುದಾಗಲಿ, ಅವರೊಂದಿಗೆ ವಾದಿಸುವುದಾಗಲಿ ಅಥವಾ ಅವರೊಂದಿಗೆ ಹೋರಾಡುವುದಾಗಲಿ ಅಲ್ಲ, ಬದಲಿಗೆ ಪ್ರೀತಿಯ ಕಲ್ಪನೆಯನ್ನು ದ್ವೇಷದ ಮುಂದೆ ಇಡುವುದು ಎಂದು ಅವರು ಹೇಳಿದ್ದಾರೆ.

ಅದು ನಮ್ಮ ರಾಜಕೀಯಕ್ಕೆ ಸಂಭಾವ್ಯ ಚೌಕಟ್ಟು ಎಂದು ನಾನು ಭಾವಿಸುತ್ತೇನೆ; ನಾವು ನೀತಿಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದೇವೆ. ವಿರೋಧ ಪಕ್ಷಗಳ (ಕಾಂಗ್ರೆಸ್‌ನ ರಾಜಕೀಯ ವಿರೋಧಿಗಳನ್ನು ಉಲ್ಲೇಖಿಸಿ) ಕೋನ ಭಯ, ಕೋಪ ಮತ್ತು ದ್ವೇಷವಾಗಿದ್ದರೆ, ಕಾಂಗ್ರೆಸ್ ಮತ್ತು ಪ್ರಗತಿಪರ ಪಕ್ಷಗಳ ದೃಷ್ಟಿಕೋನ ಪ್ರೀತಿ ಮತ್ತು ವಾತ್ಸಲ್ಯವಾಗಿರಬೇಕು ಎಂದು ರಾಹುಲ್ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ, ಕಾಂಗ್ರೆಸ್ ಸಂಪೂರ್ಣವಾಗಿ “ಹೊಸ ರಾಜಕೀಯ”ದಲ್ಲಿ ಸಿಲುಕಿಕೊಂಡಿತ್ತು. ಮಾಧ್ಯಮದಂತಹ ಎಲ್ಲಾ ಮಾರ್ಗಗಳು ಅವುಗಳ ಜೊತೆಗೆ ರಾಜಿ ಮಾಡಿಕೊಂಡವು. ಆಗ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4,000 ಕಿಲೋಮೀಟರ್ ಉದ್ದದ ಭಾರತ್ ಜೋಡೋ ಯಾತ್ರೆಯನ್ನು ಕೈಗೊಳ್ಳಲು ಮತ್ತು ಜನಸಾಮಾನ್ಯರೊಂದಿಗೆ ನೇರ ಸಂವಹನ ನಡೆಸಲು ನಿರ್ಧರಿಸಿತು ಎಂದು ಅವರು ಹೇಳಿದ್ದಾರೆ.

“ಪ್ರಪಂಚದಾದ್ಯಂತ ನಮ್ಮ ವಿರೋಧ ಪಕ್ಷಗಳು ಕೋಪ, ಭಯ ಮತ್ತು ದ್ವೇಷದ ಮೇಲೆ ಏಕಸ್ವಾಮ್ಯವನ್ನು ಹೊಂದಿದೆ. ಮತ್ತು ನಾವು ಕೋಪ, ಭಯ ಮತ್ತು ದ್ವೇಷದ ಮೇಲೆ ಅವರೊಂದಿಗೆ ಸ್ಪರ್ಧಿಸಲು ಸಾಧ್ಯವೆ ಇಲ್ಲ, ಏಕೆಂದರೆ ಅವರೆಲ್ಲರೂ ನಮ್ಮನ್ನು ಅದರಲ್ಲಿ ಮೀರಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹಳೆ ರಾಜಕಾರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...