Homeಕರ್ನಾಟಕಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

- Advertisement -
- Advertisement -

ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹಲವಾರು ತಪ್ಪುಗಳನ್ನು ಹೊಂದಿರುವ ಹೊಸ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ವಿತರಿಸಲು ಸರ್ಕಾರ ನಿರ್ಧರಿಸಿದಂತಿದೆ. ಜೊತೆಗೆ ಹಳೆಯ ಪಠ್ಯಪುಸ್ತಕಗಳನ್ನು ರದ್ದಿಗೆ ಹಾಕಿದರೂ ಜನರ ಕೈ ಸೇರಬಾರದೆಂದು ಸರ್ಕಾರ ನಿರ್ಧರಿಸಿದೆ.

ಈ ಕುರಿತು ತನಿಖಾ ಸುದ್ದಿಗಳ ಜಾಲತಾಣ ‘ದಿ ಫೈಲ್‌’ ವಿಶೇಷ ವರದಿ ಮಾಡಿದ್ದು, “83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳು 2022-23ನೇ ಸಾಲಿನಿಂದ ಅನುಪಯುಕ್ತವಾಗುತ್ತವೆ. ಈ ಪಠ್ಯಪುಸ್ತಕಗಳ ಅಂದಾಜು ಮೌಲ್ಯ 2.5 ಕೋಟಿ ರೂ. ಆಗುತ್ತದೆ. ಈ ಪುಸ್ತಕಗಳನ್ನು ನಿಯಮಾನುಸಾರ ಹರಾಜು ಹಾಕಿ ಬಂದ ಹಣವನ್ನು ಕರ್ಣಾಟಕ ಪಠ್ಯಪುಸ್ತಕ ಸಂಘಕ್ಕೆ ಜಮಾ ಮಾಡಿಕೊಳ್ಳಲು ಅನುಮತಿ ನೀಡುವುದು ಎಂದು ಕೋರಿರುತ್ತಾರೆ. ಆದರೆ ಹರಾಜು ಹಾಕಿದರೆ ಈ ಪಠ್ಯಪುಸ್ತಕಗಳನ್ನು ಬೇರೆಯವರಿಗೆ ಮರು ಮಾರಾಟವಾಗದ ರೀತಿ ಅಥವಾ ಬೇರೆಯವರಿಗೆ ದೊರಕದ ಹಾಗೆ ಕ್ರಮವಹಿಸಿದ್ದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಕಾರ್ಯ ಯಶಸ್ವಿಯಾಗುತ್ತದೆ. ತಪ್ಪಿದ್ದಲ್ಲಿ ಈ ಪುಸ್ತಕಗಳು ಓದುಗರ ಕೈ ಸೇರಿದರೆ ಸದರಿ ಕಾರ್ಯ ಯಶಸ್ವಿಗೆ ತಡೆಯಾಗಬಹುದಾದ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಅಲ್ಲದೆ 2.5 ಕೋಟಿ ರೂ. ನಷ್ಟವಾಗುವ ಹಿನ್ನಲೆಯಲ್ಲಿ ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಬೇಕು” ಎಂದು ಟಿಪ್ಪಣಿಯ ಹಾಳೆಗಳು ಹೇಳಿರುವುದಾಗಿ ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

PC: The File

“2022-23ನೇ ಸಾಲಿಗೆ ಇಷ್ಟು ಪ್ರಮಾಣದ ಪಠ್ಯಪುಸ್ತಕಗಳನ್ನು ಮುದ್ರಣ ಮಾಡಿ ವಿದ್ಯಾರ್ಥಿಗಳಿಗೆ ಹಂಚಿಕೆಯಾಗುವ ಹೊತ್ತಿಗೆ ಶೈಕ್ಷಣಿಕ ವರ್ಷ ಆರಂಭವಾಗುವುದರಿಂದ ಪಠ್ಯಪುಸ್ತಕ ವಿತರಣೆ ಕಾರ್ಯ ವಿಳಂಬವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲಿದೆ” ಎಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳನ್ನು ಮಾಡುತ್ತಿದ್ದ  ರೋಹಿತ್ ಚಕ್ರತೀರ್ಥ‌ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಿದ್ದು ಚರ್ಚೆಗೆ ಗ್ರಾಸವಾಯಿತು. ಸಮಿತಿಯು ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳು, ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬೀಳುತ್ತಲೇ ಇವೆ. ಜನ ದುರ್ಬೀನು ಹಾಕಿ ಓದುತ್ತಿದ್ದಾರೆ.

ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ದ್ರಾವಿಡ ಚಳವಳಿಯ ಪೆರಿಯಾರ್ ರಾಮಸ್ವಾಮಿ ನಾಯ್ಕರ್‌‌, ವಚನಕಾರ ಬಸವಣ್ಣ, ಆದಿ ಶಂಕರಾಚಾರ್ಯ, ಮಹಾಕವಿ ವಾಲ್ಮೀಕಿ, ಸಮಾಜ ಸುಧಾರಕ ನಾರಾಯಣಗುರು, ದಲಿತ ಬರಹಗಾರರು, ಸುರಪುರ ನಾಯಕರ ಇತಿಹಾಸ, ಭಕ್ತಿ ಪಂಥ, ಮಹಿಳಾ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ, ಬನ್ನಂಜೆ ಗೋವಿಂದಾಚಾರ್ಯ, ಹೆಡಗೇವಾರ್- ಹೀಗೆ ವಿವಾದದ ಸರಮಾಲೆಗೆ ಹೊಸ ಹೊಸ ವಿಷಯಗಳು ಸೇರಿಕೊಳ್ಳುತ್ತಲೇ ಇವೆ. ಇದು ಇಲ್ಲಿಗೆ ನಿಲ್ಲುತ್ತದೆ ಎಂಬ ಯಾವ ಖಾತ್ರಿಯೂ ಇಲ್ಲ. ಹೊಸ ಪಠ್ಯಪುಸ್ತಕಗಳನ್ನು ರದ್ದು ಮಾಡಿ ಹಳೆಯ ಪಠ್ಯಗಳನ್ನೇ ವಿತರಿಸುವ ಮನಸ್ಸನ್ನು ಸರ್ಕಾರ ಮಾಡುತ್ತಿಲ್ಲ. ಹಳೆಯ ಪಠ್ಯಪುಸ್ತಕಗಳು ಜನರ ಕೈಗೆ ಸಿಗಲೇಬಾರದೆಂದು ಸರ್ಕಾರ ಹೊರಟಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ಈ ವಿವಾದಗಳ ನಡುವೆ ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ವರದಿಯಾಗಿದೆ. 2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ವಿಷಯ ಬಯಲಾಗಿದೆ.

ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆ ಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...