Homeಕರ್ನಾಟಕಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

- Advertisement -
- Advertisement -

ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹಲವಾರು ತಪ್ಪುಗಳನ್ನು ಹೊಂದಿರುವ ಹೊಸ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ವಿತರಿಸಲು ಸರ್ಕಾರ ನಿರ್ಧರಿಸಿದಂತಿದೆ. ಜೊತೆಗೆ ಹಳೆಯ ಪಠ್ಯಪುಸ್ತಕಗಳನ್ನು ರದ್ದಿಗೆ ಹಾಕಿದರೂ ಜನರ ಕೈ ಸೇರಬಾರದೆಂದು ಸರ್ಕಾರ ನಿರ್ಧರಿಸಿದೆ.

ಈ ಕುರಿತು ತನಿಖಾ ಸುದ್ದಿಗಳ ಜಾಲತಾಣ ‘ದಿ ಫೈಲ್‌’ ವಿಶೇಷ ವರದಿ ಮಾಡಿದ್ದು, “83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳು 2022-23ನೇ ಸಾಲಿನಿಂದ ಅನುಪಯುಕ್ತವಾಗುತ್ತವೆ. ಈ ಪಠ್ಯಪುಸ್ತಕಗಳ ಅಂದಾಜು ಮೌಲ್ಯ 2.5 ಕೋಟಿ ರೂ. ಆಗುತ್ತದೆ. ಈ ಪುಸ್ತಕಗಳನ್ನು ನಿಯಮಾನುಸಾರ ಹರಾಜು ಹಾಕಿ ಬಂದ ಹಣವನ್ನು ಕರ್ಣಾಟಕ ಪಠ್ಯಪುಸ್ತಕ ಸಂಘಕ್ಕೆ ಜಮಾ ಮಾಡಿಕೊಳ್ಳಲು ಅನುಮತಿ ನೀಡುವುದು ಎಂದು ಕೋರಿರುತ್ತಾರೆ. ಆದರೆ ಹರಾಜು ಹಾಕಿದರೆ ಈ ಪಠ್ಯಪುಸ್ತಕಗಳನ್ನು ಬೇರೆಯವರಿಗೆ ಮರು ಮಾರಾಟವಾಗದ ರೀತಿ ಅಥವಾ ಬೇರೆಯವರಿಗೆ ದೊರಕದ ಹಾಗೆ ಕ್ರಮವಹಿಸಿದ್ದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಕಾರ್ಯ ಯಶಸ್ವಿಯಾಗುತ್ತದೆ. ತಪ್ಪಿದ್ದಲ್ಲಿ ಈ ಪುಸ್ತಕಗಳು ಓದುಗರ ಕೈ ಸೇರಿದರೆ ಸದರಿ ಕಾರ್ಯ ಯಶಸ್ವಿಗೆ ತಡೆಯಾಗಬಹುದಾದ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಅಲ್ಲದೆ 2.5 ಕೋಟಿ ರೂ. ನಷ್ಟವಾಗುವ ಹಿನ್ನಲೆಯಲ್ಲಿ ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಬೇಕು” ಎಂದು ಟಿಪ್ಪಣಿಯ ಹಾಳೆಗಳು ಹೇಳಿರುವುದಾಗಿ ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

PC: The File

“2022-23ನೇ ಸಾಲಿಗೆ ಇಷ್ಟು ಪ್ರಮಾಣದ ಪಠ್ಯಪುಸ್ತಕಗಳನ್ನು ಮುದ್ರಣ ಮಾಡಿ ವಿದ್ಯಾರ್ಥಿಗಳಿಗೆ ಹಂಚಿಕೆಯಾಗುವ ಹೊತ್ತಿಗೆ ಶೈಕ್ಷಣಿಕ ವರ್ಷ ಆರಂಭವಾಗುವುದರಿಂದ ಪಠ್ಯಪುಸ್ತಕ ವಿತರಣೆ ಕಾರ್ಯ ವಿಳಂಬವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲಿದೆ” ಎಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳನ್ನು ಮಾಡುತ್ತಿದ್ದ  ರೋಹಿತ್ ಚಕ್ರತೀರ್ಥ‌ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಿದ್ದು ಚರ್ಚೆಗೆ ಗ್ರಾಸವಾಯಿತು. ಸಮಿತಿಯು ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳು, ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬೀಳುತ್ತಲೇ ಇವೆ. ಜನ ದುರ್ಬೀನು ಹಾಕಿ ಓದುತ್ತಿದ್ದಾರೆ.

ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ದ್ರಾವಿಡ ಚಳವಳಿಯ ಪೆರಿಯಾರ್ ರಾಮಸ್ವಾಮಿ ನಾಯ್ಕರ್‌‌, ವಚನಕಾರ ಬಸವಣ್ಣ, ಆದಿ ಶಂಕರಾಚಾರ್ಯ, ಮಹಾಕವಿ ವಾಲ್ಮೀಕಿ, ಸಮಾಜ ಸುಧಾರಕ ನಾರಾಯಣಗುರು, ದಲಿತ ಬರಹಗಾರರು, ಸುರಪುರ ನಾಯಕರ ಇತಿಹಾಸ, ಭಕ್ತಿ ಪಂಥ, ಮಹಿಳಾ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ, ಬನ್ನಂಜೆ ಗೋವಿಂದಾಚಾರ್ಯ, ಹೆಡಗೇವಾರ್- ಹೀಗೆ ವಿವಾದದ ಸರಮಾಲೆಗೆ ಹೊಸ ಹೊಸ ವಿಷಯಗಳು ಸೇರಿಕೊಳ್ಳುತ್ತಲೇ ಇವೆ. ಇದು ಇಲ್ಲಿಗೆ ನಿಲ್ಲುತ್ತದೆ ಎಂಬ ಯಾವ ಖಾತ್ರಿಯೂ ಇಲ್ಲ. ಹೊಸ ಪಠ್ಯಪುಸ್ತಕಗಳನ್ನು ರದ್ದು ಮಾಡಿ ಹಳೆಯ ಪಠ್ಯಗಳನ್ನೇ ವಿತರಿಸುವ ಮನಸ್ಸನ್ನು ಸರ್ಕಾರ ಮಾಡುತ್ತಿಲ್ಲ. ಹಳೆಯ ಪಠ್ಯಪುಸ್ತಕಗಳು ಜನರ ಕೈಗೆ ಸಿಗಲೇಬಾರದೆಂದು ಸರ್ಕಾರ ಹೊರಟಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ಈ ವಿವಾದಗಳ ನಡುವೆ ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ವರದಿಯಾಗಿದೆ. 2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ವಿಷಯ ಬಯಲಾಗಿದೆ.

ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆ ಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...