Homeಕರ್ನಾಟಕಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

- Advertisement -
- Advertisement -

ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವುದು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹಲವಾರು ತಪ್ಪುಗಳನ್ನು ಹೊಂದಿರುವ ಹೊಸ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ವಿತರಿಸಲು ಸರ್ಕಾರ ನಿರ್ಧರಿಸಿದಂತಿದೆ. ಜೊತೆಗೆ ಹಳೆಯ ಪಠ್ಯಪುಸ್ತಕಗಳನ್ನು ರದ್ದಿಗೆ ಹಾಕಿದರೂ ಜನರ ಕೈ ಸೇರಬಾರದೆಂದು ಸರ್ಕಾರ ನಿರ್ಧರಿಸಿದೆ.

ಈ ಕುರಿತು ತನಿಖಾ ಸುದ್ದಿಗಳ ಜಾಲತಾಣ ‘ದಿ ಫೈಲ್‌’ ವಿಶೇಷ ವರದಿ ಮಾಡಿದ್ದು, “83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳು 2022-23ನೇ ಸಾಲಿನಿಂದ ಅನುಪಯುಕ್ತವಾಗುತ್ತವೆ. ಈ ಪಠ್ಯಪುಸ್ತಕಗಳ ಅಂದಾಜು ಮೌಲ್ಯ 2.5 ಕೋಟಿ ರೂ. ಆಗುತ್ತದೆ. ಈ ಪುಸ್ತಕಗಳನ್ನು ನಿಯಮಾನುಸಾರ ಹರಾಜು ಹಾಕಿ ಬಂದ ಹಣವನ್ನು ಕರ್ಣಾಟಕ ಪಠ್ಯಪುಸ್ತಕ ಸಂಘಕ್ಕೆ ಜಮಾ ಮಾಡಿಕೊಳ್ಳಲು ಅನುಮತಿ ನೀಡುವುದು ಎಂದು ಕೋರಿರುತ್ತಾರೆ. ಆದರೆ ಹರಾಜು ಹಾಕಿದರೆ ಈ ಪಠ್ಯಪುಸ್ತಕಗಳನ್ನು ಬೇರೆಯವರಿಗೆ ಮರು ಮಾರಾಟವಾಗದ ರೀತಿ ಅಥವಾ ಬೇರೆಯವರಿಗೆ ದೊರಕದ ಹಾಗೆ ಕ್ರಮವಹಿಸಿದ್ದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಕಾರ್ಯ ಯಶಸ್ವಿಯಾಗುತ್ತದೆ. ತಪ್ಪಿದ್ದಲ್ಲಿ ಈ ಪುಸ್ತಕಗಳು ಓದುಗರ ಕೈ ಸೇರಿದರೆ ಸದರಿ ಕಾರ್ಯ ಯಶಸ್ವಿಗೆ ತಡೆಯಾಗಬಹುದಾದ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಅಲ್ಲದೆ 2.5 ಕೋಟಿ ರೂ. ನಷ್ಟವಾಗುವ ಹಿನ್ನಲೆಯಲ್ಲಿ ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಬೇಕು” ಎಂದು ಟಿಪ್ಪಣಿಯ ಹಾಳೆಗಳು ಹೇಳಿರುವುದಾಗಿ ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

PC: The File

“2022-23ನೇ ಸಾಲಿಗೆ ಇಷ್ಟು ಪ್ರಮಾಣದ ಪಠ್ಯಪುಸ್ತಕಗಳನ್ನು ಮುದ್ರಣ ಮಾಡಿ ವಿದ್ಯಾರ್ಥಿಗಳಿಗೆ ಹಂಚಿಕೆಯಾಗುವ ಹೊತ್ತಿಗೆ ಶೈಕ್ಷಣಿಕ ವರ್ಷ ಆರಂಭವಾಗುವುದರಿಂದ ಪಠ್ಯಪುಸ್ತಕ ವಿತರಣೆ ಕಾರ್ಯ ವಿಳಂಬವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲಿದೆ” ಎಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳನ್ನು ಮಾಡುತ್ತಿದ್ದ  ರೋಹಿತ್ ಚಕ್ರತೀರ್ಥ‌ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಿದ್ದು ಚರ್ಚೆಗೆ ಗ್ರಾಸವಾಯಿತು. ಸಮಿತಿಯು ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳು, ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬೀಳುತ್ತಲೇ ಇವೆ. ಜನ ದುರ್ಬೀನು ಹಾಕಿ ಓದುತ್ತಿದ್ದಾರೆ.

ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ದ್ರಾವಿಡ ಚಳವಳಿಯ ಪೆರಿಯಾರ್ ರಾಮಸ್ವಾಮಿ ನಾಯ್ಕರ್‌‌, ವಚನಕಾರ ಬಸವಣ್ಣ, ಆದಿ ಶಂಕರಾಚಾರ್ಯ, ಮಹಾಕವಿ ವಾಲ್ಮೀಕಿ, ಸಮಾಜ ಸುಧಾರಕ ನಾರಾಯಣಗುರು, ದಲಿತ ಬರಹಗಾರರು, ಸುರಪುರ ನಾಯಕರ ಇತಿಹಾಸ, ಭಕ್ತಿ ಪಂಥ, ಮಹಿಳಾ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ, ಬನ್ನಂಜೆ ಗೋವಿಂದಾಚಾರ್ಯ, ಹೆಡಗೇವಾರ್- ಹೀಗೆ ವಿವಾದದ ಸರಮಾಲೆಗೆ ಹೊಸ ಹೊಸ ವಿಷಯಗಳು ಸೇರಿಕೊಳ್ಳುತ್ತಲೇ ಇವೆ. ಇದು ಇಲ್ಲಿಗೆ ನಿಲ್ಲುತ್ತದೆ ಎಂಬ ಯಾವ ಖಾತ್ರಿಯೂ ಇಲ್ಲ. ಹೊಸ ಪಠ್ಯಪುಸ್ತಕಗಳನ್ನು ರದ್ದು ಮಾಡಿ ಹಳೆಯ ಪಠ್ಯಗಳನ್ನೇ ವಿತರಿಸುವ ಮನಸ್ಸನ್ನು ಸರ್ಕಾರ ಮಾಡುತ್ತಿಲ್ಲ. ಹಳೆಯ ಪಠ್ಯಪುಸ್ತಕಗಳು ಜನರ ಕೈಗೆ ಸಿಗಲೇಬಾರದೆಂದು ಸರ್ಕಾರ ಹೊರಟಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ಈ ವಿವಾದಗಳ ನಡುವೆ ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ವರದಿಯಾಗಿದೆ. 2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ವಿಷಯ ಬಯಲಾಗಿದೆ.

ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆ ಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...