Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...